ಅಡಿಕೆ ರೋಗದ ಅಧ್ಯಯನಕ್ಕೆ ಸಮಿತಿ ರಚನೆ ಮಾಡಿದ ಕೇಂದ್ರ ಸರ್ಕಾರ | ಕ್ಯಾಂಪ್ಕೋ ಶ್ಲಾಘನೆ |

October 21, 2022
11:05 PM

ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror