ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…