ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…