ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…