ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ವೈಜ್ಞಾನಿಕ ಸಂಶೋಧನೆಯನ್ನು ನಡೆಸಿ ಪರಿಹಾರ ಕಂಡು ಹಿಡಿದು ವರದಿ ಸಲ್ಲಿಸಲು ಸೂಚಿಸಲಾಗಿದೆ, ಸಚಿವರ ಕ್ರಮಕ್ಕೆ ಕ್ಯಾಂಪ್ಕೊ ಸಂತಸಪಟ್ಟಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಯನ್ನು ನಾಶ ಮಾಡಿ ರೈತರ ಬದುಕನ್ನು ಸಂಕಷ್ಟಕ್ಕೆ ತಳ್ಳಿದೆ. ಇದರಿಂದ ಅಡಿಕೆ ಕೃಷಿಕ ಕಂಗಾಲಾಗಿ ಪರಿಹಾರವಿಲ್ಲದೆ ಪರಿತಪಿಸುವಂತಾಗಿದೆ. ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಮಸ್ಯೆಗೆ ಕೇಂದ್ರ ಸರ್ಕಾರ ಸ್ಪಂದನೆ ನೀಡಿದೆ. ಸಚಿವರುಗಳ ಈ ಕ್ರಮದಿಂದ ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದರಿಂದ ಕಂಗಾಲಾಗಿರುವ ಲಕ್ಷಾಂತರ ಕೃಷಿಕರು ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರದ ಸಕರಾತ್ಮಕ ಸ್ಪಂದನೆಗೆ ಕ್ಯಾಂಪ್ಕೊ ಆಡಳಿತ ಮಂಡಳಿ ಎಲ್ಲಾ ಅಡಿಕೆ ಬೆಳೆಗಾರರ ಪರವಾಗಿ ಕೆಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…