ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.
ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್ ಉತ್ಪನ್ನವನ್ನು ಬಿಡುಗಡೆಗೊಳಿಸಿದರು.
ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…