ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.
ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್ ಉತ್ಪನ್ನವನ್ನು ಬಿಡುಗಡೆಗೊಳಿಸಿದರು.
ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…