Advertisement
ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆ | 63.60 ಕೋಟಿ ರೂಪಾಯಿ ನಿವ್ವಳ ಲಾಭ | ಶೇ.15 ಡಿವಿಡೆಂಡ್ ಘೋಷಣೆ |

Share

ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ  ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.  ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.

ಕಳೆದ ಬಾರಿ 51,784.38 ಮೆಟ್ರಿಕ್ ಟನ್ ಅಡಿಕೆ ಕ್ಯಾಂಪ್ಕೋ ಖರೀದಿ ಮಾಡಿದೆ.  ಇದರಲ್ಲಿ 17,888.69 ಮೆಟ್ರಿಕ್ ಟನ್
ಕೆಂಪಡಿಕೆ ಮತ್ತು  33,895.69 ಮೆಟ್ರಿಕ್ ಟನ್ ಬಿಳಿ ಅಡಿಕೆ ಸೇರಿದೆ. 2,943.98 ಮೆಟ್ರಿಕ್ ಟನ್ ಕೋಕ್ಕೋ ಹಸಿ ಬೀಜ ಮತ್ತು
4,458.59 ಮೆಟ್ರಿಕ  ಟನ್ ಒಣಬೀಜ ಖರೀದಿಸಿದೆ. ಚಾಕಲೇಟ್ ಕಾರ್ಖಾನೆಯ ಒಟ್ಟು ಉತ್ಪಾದನೆ 13,791.13 ಮೆಟ್ರಿಕ್ ಟನ್‍ಗೆ ತಲುಪಿದೆ.  2,070.97 ಮೆಟ್ರಿಕ್ ಟನ್ ರಬ್ಬರ್ ಖರೀದಿಸಿದ್ದು, 2,081.81 ಮೆಟ್ರಿಕ್ ಟನ್ ಕಾಳುಮೆಣಸು ಖರೀದಿಸಲಾಗಿದೆ.

ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ  ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್  ಉತ್ಪನ್ನವನ್ನು ಬಿಡುಗಡೆಗೊಳಿಸಿದರು.

ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

2 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

2 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

12 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

13 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

18 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

18 hours ago