ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.
ಕಳೆದ ಬಾರಿ 51,784.38 ಮೆಟ್ರಿಕ್ ಟನ್ ಅಡಿಕೆ ಕ್ಯಾಂಪ್ಕೋ ಖರೀದಿ ಮಾಡಿದೆ. ಇದರಲ್ಲಿ 17,888.69 ಮೆಟ್ರಿಕ್ ಟನ್ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್ ಉತ್ಪನ್ನವನ್ನು ಬಿಡುಗಡೆಗೊಳಿಸಿದರು.
ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…