ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.
ಕಳೆದ ಬಾರಿ 51,784.38 ಮೆಟ್ರಿಕ್ ಟನ್ ಅಡಿಕೆ ಕ್ಯಾಂಪ್ಕೋ ಖರೀದಿ ಮಾಡಿದೆ. ಇದರಲ್ಲಿ 17,888.69 ಮೆಟ್ರಿಕ್ ಟನ್ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್ ಉತ್ಪನ್ನವನ್ನು ಬಿಡುಗಡೆಗೊಳಿಸಿದರು.
ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…