Advertisement
ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆ | 63.60 ಕೋಟಿ ರೂಪಾಯಿ ನಿವ್ವಳ ಲಾಭ | ಶೇ.15 ಡಿವಿಡೆಂಡ್ ಘೋಷಣೆ |

Share

ಕ್ಯಾಂಪ್ಕೋ ಮಹಾಸಭೆ ಶನಿವಾರ ಮಂಗಳೂರಿನ ಸಂಘನಿಕೇತನದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಕ್ಯಾಂಪ್ಕೋ ಈ ಬಾರಿ 2,778.39 ಕೋಟಿ ರೂಪಾಯಿ  ವ್ಯವಹಾರ ನಡೆಸಿ, 63.60 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.  ಶೇ.15 ಡಿವಿಡೆಂಡ್ ಘೋಷಣೆ ಮಾಡಲಾಯಿತು. ಇದರ ಜೊತೆಗೆ 7,500 ಕೆಜಿ ಮಿತಿಗೆ ಒಳಪಟ್ಟು ಕಿಲೋಗೆ 1 ರೂಪಾಯಿ ಪ್ರೋತ್ಸಾಹಧನ, ಕೊಕೋ ಬೀಜ ಖರೀದಿ ಮೇಲೂ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದರು.

ಕಳೆದ ಬಾರಿ 51,784.38 ಮೆಟ್ರಿಕ್ ಟನ್ ಅಡಿಕೆ ಕ್ಯಾಂಪ್ಕೋ ಖರೀದಿ ಮಾಡಿದೆ.  ಇದರಲ್ಲಿ 17,888.69 ಮೆಟ್ರಿಕ್ ಟನ್
ಕೆಂಪಡಿಕೆ ಮತ್ತು  33,895.69 ಮೆಟ್ರಿಕ್ ಟನ್ ಬಿಳಿ ಅಡಿಕೆ ಸೇರಿದೆ. 2,943.98 ಮೆಟ್ರಿಕ್ ಟನ್ ಕೋಕ್ಕೋ ಹಸಿ ಬೀಜ ಮತ್ತು
4,458.59 ಮೆಟ್ರಿಕ  ಟನ್ ಒಣಬೀಜ ಖರೀದಿಸಿದೆ. ಚಾಕಲೇಟ್ ಕಾರ್ಖಾನೆಯ ಒಟ್ಟು ಉತ್ಪಾದನೆ 13,791.13 ಮೆಟ್ರಿಕ್ ಟನ್‍ಗೆ ತಲುಪಿದೆ.  2,070.97 ಮೆಟ್ರಿಕ್ ಟನ್ ರಬ್ಬರ್ ಖರೀದಿಸಿದ್ದು, 2,081.81 ಮೆಟ್ರಿಕ್ ಟನ್ ಕಾಳುಮೆಣಸು ಖರೀದಿಸಲಾಗಿದೆ.

ಮಹಾಸಭೆಯಲ್ಲಿ ಕ್ಯಾಂಪ್ಕೋ ನೂತನ ಉತ್ಪನ್ನಗಳಾದ  ಹೊಸ ಚಾಕಲೇಟ್, ಹೊಸ ರೂಪದ ಸುಪಾರಿ ಸೌಗಂಧ್ ಹಾಗೂ ಕಲ್ಪ ಹೆಸರಿನ ತೆಂಗಿನ ಎಣ್ಣೆಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರುಗಳಾದ ನ.ಸೀತಾರಾಮ ಮತ್ತು ಹಾಗೂ ಗೋಪಾಲ ಚೆಟ್ಟಿಯಾರ್  ಉತ್ಪನ್ನವನ್ನು ಬಿಡುಗಡೆಗೊಳಿಸಿದರು.

ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಕೃಷ್ಣಪ್ರಸಾದ್ ಮಡ್ತಿಲ,
ಶಂಭುಲಿಂಗ ಜಿ.ಹೆಗ್ಡೆ, ಕೆ.ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ್ ಪಟ್ಟಾಜೆ, ಎಂ.ಮಹೇಶ್ ಚೌಟ, ರಾಘವೇಂದ್ರ ಭಟ್, ಜಯಪ್ರಕಾಶ್ ನಾರಾಯಣ, ರಾಧಾಕೃಷ್ಣ, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ರಾಘವೇಂದ್ರ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ್ ಇದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

24 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

32 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

47 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago