ಕೃಷಿಕರ ಹೆಮ್ಮೆಯ ಸಂಸ್ಥೆ, ಕ್ಯಾಂಪ್ಕೋ ಮಹಾಸಭೆಯಲ್ಲಿ ಭಾಗವಹಿಸುವುದು ಮಾತ್ರವಲ್ಲ ಸಭೆಯಲ್ಲಿ ತೊಡಗಿಸಿಕೊಳ್ಳುವುದು ಹೆಮ್ಮೆಯ ಸಂಗತಿ. ಏಕೆಂದರೆ ಅದಿ ಕೃಷಿಕರ ಸಂಸ್ಥೆ. ರಚನಾತ್ಮಕವಾದ ಸಲಹೆ ನೀಡುತ್ತಾ ಸಂಸ್ಥೆಯನ್ನು ಇನ್ನಷ್ಟು ಗಟ್ಟಿ ಮಾಡುವುದು ನಮ್ಮ ಹೆಮ್ಮೆ. ಏಕೆಂದರೆ ಅದು ನಮ್ಮ ಸಂಸ್ಥೆ ಕ್ಯಾಂಪ್ಕೋ.
ಬೆಳಿಗ್ಗೆಯಿಂದ ಮಧ್ಯಾಹ್ನದ 11.3 0ರ ವರೆಗೂ ಕಾಫಿ, ಚಹಾ, ತಿಂಡಿಗಳ ಅಚ್ಚುಕಟ್ಟು ವ್ಯವಸ್ಥೆ ಮಾಡಿದ್ದರು. ಇಷ್ಟಾದರೂ ಮಧ್ಯಾಹ್ನ 2.00 ಗಂಟೆಗೆ ನಿರೀಕ್ಷೆಗೂ ಮೀರಿದ ಸದಸ್ಯರು ಬಂದಾಗ ಊಟ ಒಮ್ಮೆಗೆ ಖಾಲಿಯಾದಾಗ ನಾವು ಸಭೆಯಲ್ಲಿ ಈ ಬಗ್ಗೆಯೂ ಸದ್ದು ಮಾಡಿ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳಲು ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.
ಒಂದುವರೆ ಸಾವಿರಕ್ಕಿಂತಲೂ ಹೆಚ್ಚು ಕಿಟ್ ವ್ಯವಸ್ಥೆ ಮಾಡಿದ್ದರೂ, ನಿರೀಕ್ಷೆಗೂ ಮೀರಿದ ಸದಸ್ಯರು ಬಂದಾಗ, ಅದು ಮುಗಿದಾಗ, ಹೈಎಂಡ್ ಕಾರುಗಳಲ್ಲಿ ಬಂದು ಪಾರ್ಕಿಂಗ್ ಗೂ ಜಾಗ ಇಲ್ಲದಷ್ಟು ಕಾರುಗಳು ತುಂಬಿದ್ದರೂ ಉಚಿತ ಉಡುಗೊರೆಗಾಗಿ ಸದ್ದು ಮಾಡಿ ಅಧ್ಯಕ್ಷ ರನ್ನು ತರಾಟೆಗೆ ತೆಗೆದುಕೊಳ್ಳಲು ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.
ಕೆಲವು ಗಂಭೀರ ವಿಚಾರಗಳು ಬಂದಾಗ ಮಹತ್ವದ ಸಲಹೆಗಳನ್ನೂ ಕೊಡಲು ನಾವು ಮರೆಯಲಿಲ್ಲ, ಪರಿಹಾರ ಕಾಣದೆ ಬಿಡಲು ಮನಸ್ಸಾಗಲಿಲ್ಲ, ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.
ಅಡಿಕೆ ಹಳದಿ ಎಲೆರೋಗದ ವಿಷಯದಲ್ಲಿ ಬೆಳೆಗಾರರ ಪರವಾಗಿ ಸಂಶೋಧನೆಗೆ ಪೂರ್ವಭಾವಿಯಾಗಿ ನಿಯೋಗ ರಚಿಸಿ, ತಿಂಗಳೊಳಗಾಗಿ ನಿಯೋಗದ ಸಭೆ ಕರೆಯಲು ನಿರ್ಣಯ ಘೋಷಿಸಿದಾಗ ನಾವು ಅಧ್ಯಕ್ಷರಿಗೆ ಜೈಕಾರ ಹಾಕಲೂ ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.
ಕ್ಯಾಂಪ್ಕೋ ಏಕೆ ಹೆಚ್ಚು ಇಷ್ಟ ಎಂದರೆಮ ಅದು ನಮ್ಮ ಸಂಸ್ಥೆ. ಅದನ್ನು ಕಟ್ಟಿದ್ದು ಸುಮ್ಮನೆಯಲ್ಲ, ಬೆಳೆಗಾರರ ಹಿತಕ್ಕಾಗಿ. ಅಡಿಕೆಗೆ 3 ರೂಪಾಯಿ ಇದ್ದಾಗ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿದ್ದ ವಾರಣಾಸಿ ಸುಬ್ರಾಯ ಭಟ್ಟರು ಅಲ್ಲಿಂದಲೇ ಆರಂಭ ಮಾಡಿದ ಹೋರಾಟದ ಫಲ ಅದು. ಅಡಿಕೆ ಬೆಳೆಗಾರರ ಸಂಘದ ಮೂಲಕ ಮನೆ ಮನೆಗೆ ಶೇರು ಸಂಗ್ರಹಕ್ಕೆ ಹೋದ ಶ್ರಮದ ಬೆವರು ಅದು. ಇಂದು ನಮ್ಮೆಲ್ಲರ ಹೆಮ್ಮೆಯ ಸಂಸ್ಥೆ ಅದು. ಹೀಗಾಗಿ ಕ್ಯಾಂಪ್ಕೋ ನಮ್ಮೆಲ್ಲರ ಸಂಸ್ಥೆ. ಇದು ನಮ್ಮ ಕ್ಯಾಂಪ್ಕೊ.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…