Advertisement
ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆ | ನಮ್ಮ ಹೆಮ್ಮೆಯ ಕ್ಯಾಂಪ್ಕೋ ಸಂಸ್ಥೆ |

Share
ಕ್ಯಾಂಪ್ಕೋ ಮಹಾಸಭೆಯಲ್ಲಿ ಭಾಗವಹಿಸಿದ ಕೃಷಿಕ, ಭಾರತೀಯ ಕಿಸಾನ್‌ ಸಂಘದ ಸುಳ್ಯ ತಾಲೂಕು ಕಾರ್ಯದರ್ಶಿ ಸಾಯಿಶೇಖರ್‌ ಅವರು ತಮ್ಮ ಅಭಿಪ್ರಾಯ ಹೀಗೆ ಹೇಳಿದ್ದಾರೆ….

ಕೃಷಿಕರ ಹೆಮ್ಮೆಯ ಸಂಸ್ಥೆ, ಕ್ಯಾಂಪ್ಕೋ ಮಹಾಸಭೆಯಲ್ಲಿ ಭಾಗವಹಿಸುವುದು  ಮಾತ್ರವಲ್ಲ ಸಭೆಯಲ್ಲಿ ತೊಡಗಿಸಿಕೊಳ್ಳುವುದು  ಹೆಮ್ಮೆಯ ಸಂಗತಿ. ಏಕೆಂದರೆ ಅದಿ ಕೃಷಿಕರ ಸಂಸ್ಥೆ. ರಚನಾತ್ಮಕವಾದ ಸಲಹೆ ನೀಡುತ್ತಾ ಸಂಸ್ಥೆಯನ್ನು ಇನ್ನಷ್ಟು ಗಟ್ಟಿ ಮಾಡುವುದು ನಮ್ಮ ಹೆಮ್ಮೆ. ಏಕೆಂದರೆ ಅದು ನಮ್ಮ ಸಂಸ್ಥೆ ಕ್ಯಾಂಪ್ಕೋ.

ಬೆಳಿಗ್ಗೆಯಿಂದ ಮಧ್ಯಾಹ್ನದ 11.3 0ರ ವರೆಗೂ ಕಾಫಿ, ಚಹಾ, ತಿಂಡಿಗಳ ಅಚ್ಚುಕಟ್ಟು ವ್ಯವಸ್ಥೆ ಮಾಡಿದ್ದರು. ಇಷ್ಟಾದರೂ ಮಧ್ಯಾಹ್ನ 2.00 ಗಂಟೆಗೆ ನಿರೀಕ್ಷೆಗೂ ಮೀರಿದ ಸದಸ್ಯರು ಬಂದಾಗ ಊಟ ಒಮ್ಮೆಗೆ ಖಾಲಿಯಾದಾಗ ನಾವು ಸಭೆಯಲ್ಲಿ ಈ ಬಗ್ಗೆಯೂ ಸದ್ದು ಮಾಡಿ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳಲು ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.

ಒಂದುವರೆ ಸಾವಿರಕ್ಕಿಂತಲೂ ಹೆಚ್ಚು ಕಿಟ್ ವ್ಯವಸ್ಥೆ ಮಾಡಿದ್ದರೂ‌, ನಿರೀಕ್ಷೆಗೂ ಮೀರಿದ ಸದಸ್ಯರು ಬಂದಾಗ, ಅದು ಮುಗಿದಾಗ, ಹೈಎಂಡ್ ಕಾರುಗಳಲ್ಲಿ ಬಂದು ಪಾರ್ಕಿಂಗ್ ಗೂ ಜಾಗ ಇಲ್ಲದಷ್ಟು ಕಾರುಗಳು ತುಂಬಿದ್ದರೂ ಉಚಿತ ಉಡುಗೊರೆಗಾಗಿ ಸದ್ದು ಮಾಡಿ ಅಧ್ಯಕ್ಷ ರನ್ನು ತರಾಟೆಗೆ ತೆಗೆದುಕೊಳ್ಳಲು ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.

ಕೆಲವು ಗಂಭೀರ ವಿಚಾರಗಳು ಬಂದಾಗ ಮಹತ್ವದ ಸಲಹೆಗಳನ್ನೂ ಕೊಡಲು ನಾವು ಮರೆಯಲಿಲ್ಲ, ಪರಿಹಾರ ಕಾಣದೆ ಬಿಡಲು ಮನಸ್ಸಾಗಲಿಲ್ಲ, ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.

ಅಡಿಕೆ ಹಳದಿ ಎಲೆರೋಗದ ವಿಷಯದಲ್ಲಿ ಬೆಳೆಗಾರರ ಪರವಾಗಿ ಸಂಶೋಧನೆಗೆ ಪೂರ್ವಭಾವಿಯಾಗಿ ನಿಯೋಗ ರಚಿಸಿ, ತಿಂಗಳೊಳಗಾಗಿ ನಿಯೋಗದ ಸಭೆ ಕರೆಯಲು ನಿರ್ಣಯ ಘೋಷಿಸಿದಾಗ ನಾವು ಅಧ್ಯಕ್ಷರಿಗೆ ಜೈಕಾರ ಹಾಕಲೂ ಮರೆಯಲಿಲ್ಲ. ಯಾಕೆಂದರೆ ಅದು ನಮ್ಮ ಕ್ಯಾಂಪ್ಕೊ.

ಕ್ಯಾಂಪ್ಕೋ ಏಕೆ ಹೆಚ್ಚು ಇಷ್ಟ ಎಂದರೆಮ ಅದು ನಮ್ಮ ಸಂಸ್ಥೆ. ಅದನ್ನು ಕಟ್ಟಿದ್ದು ಸುಮ್ಮನೆಯಲ್ಲ, ಬೆಳೆಗಾರರ ಹಿತಕ್ಕಾಗಿ. ಅಡಿಕೆಗೆ 3 ರೂಪಾಯಿ ಇದ್ದಾಗ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿದ್ದ ವಾರಣಾಸಿ ಸುಬ್ರಾಯ ಭಟ್ಟರು ಅಲ್ಲಿಂದಲೇ ಆರಂಭ ಮಾಡಿದ ಹೋರಾಟದ ಫಲ ಅದು. ಅಡಿಕೆ ಬೆಳೆಗಾರರ ಸಂಘದ ಮೂಲಕ ಮನೆ ಮನೆಗೆ ಶೇರು ಸಂಗ್ರಹಕ್ಕೆ ಹೋದ ಶ್ರಮದ ಬೆವರು ಅದು. ಇಂದು ನಮ್ಮೆಲ್ಲರ ಹೆಮ್ಮೆಯ ಸಂಸ್ಥೆ ಅದು. ಹೀಗಾಗಿ ಕ್ಯಾಂಪ್ಕೋ ನಮ್ಮೆಲ್ಲರ ಸಂಸ್ಥೆ. ಇದು ನಮ್ಮ ಕ್ಯಾಂಪ್ಕೊ.

ಅಭಿಪ್ರಾಯ :
ಸಾಯಿಶೇಖರ್‌ ಕರಿಕರ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

6 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

7 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

8 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

13 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

14 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

17 hours ago