ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆಯಲ್ಲಿ ಚರ್ಚೆಯಾದ ಅಡಿಕೆ ಹಳದಿ ಎಲೆರೋಗ | ಸಂಶೋಧನೆಗೆ ಕ್ರಮ ಕೈಗೊಳ್ಳಲು ಸದಸ್ಯರಿಂದ ಒತ್ತಡ | ಮುಂದಿನ ತಿಂಗಳೊಳಗೆ ತಜ್ಞರ ಜೊತೆ ಸಭೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ  ಹಾಗೂ ಕಾಸರಗೋಡು ಜಿಲ್ಲೆಯ ವಿವಿದೆಡೆ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿ ತಕ್ಷಣವೇ ಸೂಕ್ತ ಕ್ರಮವಾಗಬೇಕು, ಕ್ಯಾಂಪ್ಕೋ ಮೂಲಕ ಸಂಶೋಧನೆಗೆ ನೆರವು ಅಗತ್ಯ ಇದೆ ಎಂದು ಸದಸ್ಯರು  ಕ್ಯಾಂಪ್ಕೋ(CAMPCO) ಮಹಾಸಭೆಯಲ್ಲಿ ಒತ್ತಾಯಿಸಿದರು. ಈ ಬಗ್ಗೆ ಸುದೀರ್ಘ ಚರ್ಚೆ ನಡೆದು, ಮುಂದಿನ ತಿಂಗಳೊಳಗೆ ಕ್ಯಾಂಪ್ಕೋದಲ್ಲಿ ಅಡಿಕೆ ಸಂಶೋಧನಾ ಪ್ರತಿಷ್ಟಾನ (ARDF) ಹಾಗೂ ತಜ್ಞರು ಮತ್ತು ವಿವಿಧ ಸಂಘಟನೆಗಳು ಜೊತೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

Advertisement

ಮಂಗಳೂರಿನ ಸಂಘನಿಕೇತನದಲ್ಲಿ ಶನಿವಾರ ಕ್ಯಾಂಪ್ಕೋದ  48ನೇ ವಾರ್ಷಿಕ ಮಹಾಸಭೆ (Campco Annual Meet) ನಡೆಯಿತು. ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಮುಖವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ದಕ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಮುಖರು ಸಭೆಯಲ್ಲಿ ಮಾತನಾಡಿದರು. ಅಡಿಕೆ ಹಳದಿ ಎಲೆರೋಗದಿಂದ (Arecanut Yellow Leaf Disease) ಕೃಷಿಕರು ಕಂಗಾಲಾಗಿದ್ದಾರೆ. ಸುಳ್ಯದ ಸಂಪಾಜೆಯಲ್ಲಿ ವ್ಯಾಪಕವಾಗಿದೆ, ಕೃಷಿಕರು ಕಂಗೆಟ್ಟಿದ್ದಾರೆ, ಹೀಗಾಗಿ ಕ್ಯಾಂಪ್ಕೋ ಮೂಲಕವೇ ಹಳದಿ ಎಲೆರೋಗಕ್ಕೆ ಸಂಶೋಧನೆ, ಹಳದಿ ಎಲೆರೋಗಕ್ಕೆ ಪರಿಹಾರಕ್ಕೆ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಆದರೆ ಕ್ಯಾಂಪ್ಕೋ ಬೈಲಾ ಪ್ರಕಾರ ಅಡಿಕೆ ಹಳದಿ ಎಲೆರೋಗಕ್ಕೆ ನೇರವಾಗಿ ಯಾವುದೇ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ಅಡಿಕೆ ಸಂಶೋಧನಾ ಪ್ರತಿಷ್ಟಾನ ಮೂಲಕ ಅಡಿಕೆ ಬೆಳೆಗಾರರ ಸಂಘಗಳು ಹಾಗೂ ಇತರ ಸಂಘಗಗಳ ಮೂಲಕ ಅಡಿಕೆ ಹಳದಿ ಎಲೆರೋಗ ಸಂಶೋಧನೆ ಸಾಧ್ಯವಿದೆ. ಇದಕ್ಕಾಗಿ ಮುಂದಿನ  ತಿಂಗಳೊಳಗೆ ಕ್ಯಾಂಪ್ಕೋದಲ್ಲಿ ಸಭೆ ನಡೆಸುವುದಾಗಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಕ್ಯಾಂಪ್ಕೋ ಈಗಾಗಲೇ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿದಂತೆ ರಾಜ್ಯ, ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ. ರಾಜ್ಯ ಸರ್ಕಾರ 25 ಕೋಟಿ ಬಿಡುಗಡೆ ಮಾಡಿದೆ. ಇದಕ್ಕೆ ಕ್ಯಾಂಪ್ಕೋ ಪ್ರಮುಖ ಕಾರಣ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಅಡಿಕೆ ವಿವಿಧ ಸಮಸ್ಯೆಗೆ ಸಂಬಂಧಿಸಿ ARDF ಮೂಲಕವೂ ಹಲವು ಸಂಶೋಧನೆ ನಡೆಸಲಾಗಿದೆ. ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಅಪಾಯ ದೂರ ಮಾಡಲು ಈಗಾಗಲೇ ಅಡಿಕೆ ಸಂಶೋಧನೆ ಹಾಗೂ ಅಭಿವೃಧ್ಧಿ ನಿಧಿಯಿಂದ ಎ ಆರ್‌ ಡಿ ಎಫ್‌ ಮೂಲಕ ನೀಡಲಾಗಿದೆ. ಆ ವರದಿಯೂ ಸದ್ಯದಲ್ಲೇ ಬರಲಿದೆ. ಇದೇ ಮಾದರಿಯಲ್ಲಿ ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ ಮಾಡಲು ARDF ಹಾಗೂ ಅಡಿಕೆ ಬೆಳೆಗಾರರ ಪ್ರಮುಖರ ಜೊತೆ ಸಭೆ ನಡೆಸಿ ಮುಂದಿನ ತಿಂಗಳೊಳಗೆ ARDF ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆಯವರನ್ನೂ ಭೇಟಿ ಮಾಡಿ ಕ್ರಮ ಕೈಗೊಳ್ಳಲಾಗುವುದು  ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಅಡಿಕೆ ಬೆಳೆಗಾರರು ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಧ್ವನಿ ಎತ್ತಿದರು. ಕ್ಯಾಂಪ್ಕೋ ಈ ಬಗ್ಗೆ ಅತ್ಯಂತ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಅಡಿಕೆ ಮಾರುಕಟ್ಟೆ ಮಾತ್ರವಲ್ಲ ಅಡಿಕೆ ಬೆಳೆಗಾರರ ಹಿತದ ಕಡೆಗೂ ಗಮನಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿ ಪ್ರಮುಖರಾದ ಎಂ ಜಿ ಸತ್ಯನಾರಾಯಣ, ಡಿ ಬಿ ಬಾಲಕೃಷ್ಣ ,ಸುಬ್ರಹ್ಮಣ್ಯ, ಅನಂತ ಭಟ್‌ ಮಚ್ಚಿಮಲೆ, ಶ್ರೀಕೃಷ್ಣ ಭಟ್‌ ಕೊಪ್ಪರತೋಟ, ನಾಗೇಶ್‌ ಕುಂದಲ್ಪಾಡಿ, ವಿಶ್ವನಾಥ ರೈ ಕಳಂಜ, ರಾಧಾಕೃಷ್ಣ ಕೋಟೆ, ಮಹೇಶ್‌ ಪುಚ್ಚಪ್ಪಾಡಿ   ಸೇರಿದಂತೆ 1೦ಕ್ಕೂ ಹೆಚ್ಚು ಜನರು ಮಾತನಾಡಿದರು.

ಅಡಿಕೆ ವಹಿವಾಟಿನಲ್ಲಿ ಶೇ.5 ಜಿಎಸ್‍ಟಿ  ಸರ್ಕಾರಕ್ಕೆ ಪಾವತಿಸಲಾಗುತ್ತಿದ್ದು, 350 ಕೋಟಿ ರೂಪಾಯಿಗೂ  ಅಧಿಕ ತೆರಿಗೆ ಮೊತ್ತ ಸರ್ಕಾರಕ್ಕೆ ಪಾವತಿಸಲಾಗಿದೆ. ಇದರಲ್ಲಿ ಶೇ.1 ಮೊತ್ತವನ್ನು ಸಂಶೋಧನೆಗೆ ಬಳಕೆ ಮಾಡಲು
ಕಲ್ಪಿಸುವಂತೆ ಮಹಾಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಒತ್ತಾಯಿಸಿ, ಸರ್ಕಾರದ ಗಮನಕ್ಕೆ ಈಗಾಗಲೇ ತರಲಾಗಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

8 hours ago

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

8 hours ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

23 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

23 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

23 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago