Advertisement
ಸುದ್ದಿಗಳು

ಕ್ಯಾಂಪ್ಕೋ ಮಹಾಸಭೆಯಲ್ಲಿ ಚರ್ಚೆಯಾದ ಅಡಿಕೆ ಹಳದಿ ಎಲೆರೋಗ | ಸಂಶೋಧನೆಗೆ ಕ್ರಮ ಕೈಗೊಳ್ಳಲು ಸದಸ್ಯರಿಂದ ಒತ್ತಡ | ಮುಂದಿನ ತಿಂಗಳೊಳಗೆ ತಜ್ಞರ ಜೊತೆ ಸಭೆ |

Share

ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ  ಹಾಗೂ ಕಾಸರಗೋಡು ಜಿಲ್ಲೆಯ ವಿವಿದೆಡೆ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿ ತಕ್ಷಣವೇ ಸೂಕ್ತ ಕ್ರಮವಾಗಬೇಕು, ಕ್ಯಾಂಪ್ಕೋ ಮೂಲಕ ಸಂಶೋಧನೆಗೆ ನೆರವು ಅಗತ್ಯ ಇದೆ ಎಂದು ಸದಸ್ಯರು  ಕ್ಯಾಂಪ್ಕೋ(CAMPCO) ಮಹಾಸಭೆಯಲ್ಲಿ ಒತ್ತಾಯಿಸಿದರು. ಈ ಬಗ್ಗೆ ಸುದೀರ್ಘ ಚರ್ಚೆ ನಡೆದು, ಮುಂದಿನ ತಿಂಗಳೊಳಗೆ ಕ್ಯಾಂಪ್ಕೋದಲ್ಲಿ ಅಡಿಕೆ ಸಂಶೋಧನಾ ಪ್ರತಿಷ್ಟಾನ (ARDF) ಹಾಗೂ ತಜ್ಞರು ಮತ್ತು ವಿವಿಧ ಸಂಘಟನೆಗಳು ಜೊತೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಮಂಗಳೂರಿನ ಸಂಘನಿಕೇತನದಲ್ಲಿ ಶನಿವಾರ ಕ್ಯಾಂಪ್ಕೋದ  48ನೇ ವಾರ್ಷಿಕ ಮಹಾಸಭೆ (Campco Annual Meet) ನಡೆಯಿತು. ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಮುಖವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ದಕ ಜಿಲ್ಲೆಯ, ಕಾಸರಗೋಡು ಜಿಲ್ಲೆಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಮುಖರು ಸಭೆಯಲ್ಲಿ ಮಾತನಾಡಿದರು. ಅಡಿಕೆ ಹಳದಿ ಎಲೆರೋಗದಿಂದ (Arecanut Yellow Leaf Disease) ಕೃಷಿಕರು ಕಂಗಾಲಾಗಿದ್ದಾರೆ. ಸುಳ್ಯದ ಸಂಪಾಜೆಯಲ್ಲಿ ವ್ಯಾಪಕವಾಗಿದೆ, ಕೃಷಿಕರು ಕಂಗೆಟ್ಟಿದ್ದಾರೆ, ಹೀಗಾಗಿ ಕ್ಯಾಂಪ್ಕೋ ಮೂಲಕವೇ ಹಳದಿ ಎಲೆರೋಗಕ್ಕೆ ಸಂಶೋಧನೆ, ಹಳದಿ ಎಲೆರೋಗಕ್ಕೆ ಪರಿಹಾರಕ್ಕೆ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಆದರೆ ಕ್ಯಾಂಪ್ಕೋ ಬೈಲಾ ಪ್ರಕಾರ ಅಡಿಕೆ ಹಳದಿ ಎಲೆರೋಗಕ್ಕೆ ನೇರವಾಗಿ ಯಾವುದೇ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ಅಡಿಕೆ ಸಂಶೋಧನಾ ಪ್ರತಿಷ್ಟಾನ ಮೂಲಕ ಅಡಿಕೆ ಬೆಳೆಗಾರರ ಸಂಘಗಳು ಹಾಗೂ ಇತರ ಸಂಘಗಗಳ ಮೂಲಕ ಅಡಿಕೆ ಹಳದಿ ಎಲೆರೋಗ ಸಂಶೋಧನೆ ಸಾಧ್ಯವಿದೆ. ಇದಕ್ಕಾಗಿ ಮುಂದಿನ  ತಿಂಗಳೊಳಗೆ ಕ್ಯಾಂಪ್ಕೋದಲ್ಲಿ ಸಭೆ ನಡೆಸುವುದಾಗಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಕ್ಯಾಂಪ್ಕೋ ಈಗಾಗಲೇ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿದಂತೆ ರಾಜ್ಯ, ಕೇಂದ್ರ ಸರ್ಕಾರದ ಗಮನಕ್ಕೆ ತಂದಿದೆ. ರಾಜ್ಯ ಸರ್ಕಾರ 25 ಕೋಟಿ ಬಿಡುಗಡೆ ಮಾಡಿದೆ. ಇದಕ್ಕೆ ಕ್ಯಾಂಪ್ಕೋ ಪ್ರಮುಖ ಕಾರಣ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಅಡಿಕೆ ವಿವಿಧ ಸಮಸ್ಯೆಗೆ ಸಂಬಂಧಿಸಿ ARDF ಮೂಲಕವೂ ಹಲವು ಸಂಶೋಧನೆ ನಡೆಸಲಾಗಿದೆ. ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಅಪಾಯ ದೂರ ಮಾಡಲು ಈಗಾಗಲೇ ಅಡಿಕೆ ಸಂಶೋಧನೆ ಹಾಗೂ ಅಭಿವೃಧ್ಧಿ ನಿಧಿಯಿಂದ ಎ ಆರ್‌ ಡಿ ಎಫ್‌ ಮೂಲಕ ನೀಡಲಾಗಿದೆ. ಆ ವರದಿಯೂ ಸದ್ಯದಲ್ಲೇ ಬರಲಿದೆ. ಇದೇ ಮಾದರಿಯಲ್ಲಿ ಅಡಿಕೆ ಹಳದಿ ಎಲೆರೋಗದ ಬಗ್ಗೆಯೂ ಅಧ್ಯಯನ ಮಾಡಲು ARDF ಹಾಗೂ ಅಡಿಕೆ ಬೆಳೆಗಾರರ ಪ್ರಮುಖರ ಜೊತೆ ಸಭೆ ನಡೆಸಿ ಮುಂದಿನ ತಿಂಗಳೊಳಗೆ ARDF ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆಯವರನ್ನೂ ಭೇಟಿ ಮಾಡಿ ಕ್ರಮ ಕೈಗೊಳ್ಳಲಾಗುವುದು  ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು.

ಅಡಿಕೆ ಬೆಳೆಗಾರರು ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಧ್ವನಿ ಎತ್ತಿದರು. ಕ್ಯಾಂಪ್ಕೋ ಈ ಬಗ್ಗೆ ಅತ್ಯಂತ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಅಡಿಕೆ ಮಾರುಕಟ್ಟೆ ಮಾತ್ರವಲ್ಲ ಅಡಿಕೆ ಬೆಳೆಗಾರರ ಹಿತದ ಕಡೆಗೂ ಗಮನಿಸಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಅಡಿಕೆ ಹಳದಿ ಎಲೆರೋಗಕ್ಕೆ ಸಂಬಂಧಿಸಿ ಪ್ರಮುಖರಾದ ಎಂ ಜಿ ಸತ್ಯನಾರಾಯಣ, ಡಿ ಬಿ ಬಾಲಕೃಷ್ಣ ,ಸುಬ್ರಹ್ಮಣ್ಯ, ಅನಂತ ಭಟ್‌ ಮಚ್ಚಿಮಲೆ, ಶ್ರೀಕೃಷ್ಣ ಭಟ್‌ ಕೊಪ್ಪರತೋಟ, ನಾಗೇಶ್‌ ಕುಂದಲ್ಪಾಡಿ, ವಿಶ್ವನಾಥ ರೈ ಕಳಂಜ, ರಾಧಾಕೃಷ್ಣ ಕೋಟೆ, ಮಹೇಶ್‌ ಪುಚ್ಚಪ್ಪಾಡಿ   ಸೇರಿದಂತೆ 1೦ಕ್ಕೂ ಹೆಚ್ಚು ಜನರು ಮಾತನಾಡಿದರು.

ಅಡಿಕೆ ವಹಿವಾಟಿನಲ್ಲಿ ಶೇ.5 ಜಿಎಸ್‍ಟಿ  ಸರ್ಕಾರಕ್ಕೆ ಪಾವತಿಸಲಾಗುತ್ತಿದ್ದು, 350 ಕೋಟಿ ರೂಪಾಯಿಗೂ  ಅಧಿಕ ತೆರಿಗೆ ಮೊತ್ತ ಸರ್ಕಾರಕ್ಕೆ ಪಾವತಿಸಲಾಗಿದೆ. ಇದರಲ್ಲಿ ಶೇ.1 ಮೊತ್ತವನ್ನು ಸಂಶೋಧನೆಗೆ ಬಳಕೆ ಮಾಡಲು
ಕಲ್ಪಿಸುವಂತೆ ಮಹಾಸಭೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಒತ್ತಾಯಿಸಿ, ಸರ್ಕಾರದ ಗಮನಕ್ಕೆ ಈಗಾಗಲೇ ತರಲಾಗಿದೆ ಎಂದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

16 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago