ಕ್ಯಾಂಪ್ಕೋ ಮಹಾಸಭೆ | ಶೇ.15 ಡಿವಿಡೆಂಡ್‌ ಘೋಷಣೆ |

December 4, 2021
8:46 PM

 ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್‌ ಕುಮಾರ್‌ ಕೊಡ್ಗಿ ಅಧ್ಯಕ್ಷತೆಯಲ್ಲಿ  ಮಂಗಳೂರಿನ ಸಂಘನಿಕೇತನದಲ್ಲಿ  ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು  ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು. 

ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ  ಚಾಕೋಲೇಟ್‌ ಪಾರ್ಕ್‌ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ,  ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror