ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು.
ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ ಚಾಕೋಲೇಟ್ ಪಾರ್ಕ್ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ, ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…