ಕೃಷಿಕರ ಸಂಸ್ಥೆ ಕ್ಯಾಂಪ್ಕೋದ 47 ನೇ ಮಹಾಸಭೆ ಸಂಸ್ಥೆಯ ಅಧ್ಯಕ್ಷ ಕಿಶೋಕ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು. ಈ ಸಂದರ್ಭ ಶೇ.15 ಡಿವಿಡೆಂಡ್ ಹಾಗೂ ಸದಸ್ಯರಿಗೆ ಶೇ.1 ಪ್ರೋತ್ಸಾಹ ಧನವನ್ನು ವಿತರಣೆ ಮಾಡುವುದಾಗಿ ಅಧ್ಯಕ್ಷರು ಘೋಷಣೆ ಮಾಡಿದರು.
ಸಂಸ್ಥೆಯು ಈ ಬಾರಿ 100 ಕೋಟಿಗೂ ಮಿಕ್ಕಿದ ಲಾಭವನ್ನು ಹೊಂದಿದ್ದು ರೈತಪರವಾದ ಮತ್ತಷ್ಟು ಹೆಜ್ಜೆಗಳನ್ನು ಇರಿಸುವ ಬಗ್ಗೆ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಸಂಸ್ಥೆಯು ಈ ಬಾರಿ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು ಮುಂದಿನ ದಿನಗಳಲ್ಲೂ ಅಡಿಕೆ ಧಾರಣೆ ಇಳಿಕೆಯಾಗದಂತೆ ಪ್ರಯತ್ನ ಮಾಡುವುದಾಗಿ ಹೇಳಿದರು. ಕಾವು ಪ್ರದೇಶದಲ್ಲಿ ಚಾಕೋಲೇಟ್ ಪಾರ್ಕ್ ರಚನೆ ಮಾಡುವ ಪ್ರಸ್ತಾಪ ಇದ್ದು , ಅಡಿಕೆ ಬಗೆಗಿನ ಸಂಶೋಧನೆ, ಅಡಿಕೆ ಹಳದಿ ಎಲೆ ರೋಗ, ಅಡಿಕೆ ಆಮದು ಸ್ಥಗಿತ ಸಹಿತ ವಿವಿಧ ಯೋಜನೆಗಳ ಬಗ್ಗೆ ಪ್ರಕಟಿಸಿದರು. ಈ ಸಂದರ್ಭ ಸದಸ್ಯರುವ ಸಂಸ್ಥೆಯ ಹಿತದೃಷ್ಟಿಯಿಂದ ಚರ್ಚೆಯಲ್ಲಿ ಭಾಗವಹಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…