ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…