ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…