ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…