ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…