ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…