ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…