ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…