Advertisement
ಸುದ್ದಿಗಳು

ರಬ್ಬರ್‌ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಲು ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ |

Share

ರಬ್ಬರ್‌ ದರ ಕುಸಿತವಾಗಿದ್ದು ರಾಜ್ಯದ ರಬ್ಬರ್‌ ಬೆಳೆಗಾರರನ್ನು ರಕ್ಷಿಸಲು ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ಬೆಳೆಗಾರರನ್ನು ರಕ್ಷಣೆ ಮಾಡಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಅಡಿಕೆ ಬೆಳೆಗಾರರನ್ನು ಸಂಕಷ್ಟದಿಂದ ಕಾಪಾಡುವ ಸಲುವಾಗಿ 1973 ರಲ್ಲಿ  ಸುಬ್ರಾಯ ಭಟ್ಟರಿಂದ ಸ್ಥಾಪಿತವಾದ
ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೊ ರೈ ತರ ಹಿತ ಕಾಪಾಡಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ಕರ್ನಾಟಕ
ಮತ್ತು ಕೇರಳ ಸರಕಾರದ ನಿರ್ದೇ ಶನದಂತೆ 1979ರಲ್ಲಿ ಕೊಕ್ಕೊ ಖರೀ ದಿಯನ್ನು ಪ್ರಾರಂಭಿಸಿ, ರೈ ತರ ಉತ್ಪನ್ನಗಳಿಗೆ ಸ್ಥಿರ ಧಾರಣೆ
ಸಿಗಲು ಶ್ರಮವಹಿಸುತ್ತಿದೆ. ಸಮಗ್ರ ಕೃಷಿ ಮತ್ತು ಮಿಶ್ರ ಬೆಳೆ ಕೃಷಿಗೆ ಉತ್ತೇಜನ ನೀ ಡಿ ರೈ ತರಿಗೆ ಆರ್ಥಿಕ ಶಕ್ತಿ ತುಂಬಲು 2010
ಹಾಗೂ 2016 ರಲ್ಲಿ ಕ್ಯಾಂಪ್ಕೊ , ರಬ್ಬರ್ ಮತ್ತು ಕರಿಮೆಣಸಿನ ಖರೀದಿಯನ್ನು ಪ್ರಾರಂಭಿಸಿದೆ.

ಈಗ ಸುಮಾರು 60,000 ರಬ್ಬರ್ ಬೆಳೆಗಾರರಿದ್ದು , 55,000 ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 40,000 ಮೆ.ಟನ್ ನಷ್ಟು
ನೈಸರ್ಗಿಕ ರಬ್ಬರ್ ಬೆಳೆಸುತ್ತಿದ್ದು,  ಸುಮಾರು 60000 ಮೆ.ಟನ್  ಬೇಡಿಕೆ ಇರುವುದಾಗಿ ಅಂದಾಜಿಸಲಾಗಿದೆ. ಪ್ರಾರಂಭದಲ್ಲಿ
ಉತ್ತೇಜನಕಾರಿಯಾಗಿದ್ದ ರಬ್ಬರ್ ಧಾರಣೆ ನಂತರ ಕುಸಿಯಲು ಪ್ರಾರಂಭವಾಗಿ ನಿರಂತರ ಕುಸಿತದ ಹಾದಿ ಹಿಡಿದಿದೆ.  ಕರ್ನಾಟಕದಲ್ಲಿ ದಕ್ಷಿಣ ಕನ್ನಡ,ಉತ್ತರ ಕನ್ನಡ,ಕೊಡಗು,ಶಿವಮೊಗ್ಗ,ಚಿಕ್ಕಮಂಗಳೂರು,ಹಾಸನ ಮತ್ತು ಮೈಸೂರು
ಜಿಲ್ಲೆಗಳಲ್ಲಿ ಪ್ರಮುಖವಾಗಿ ರಬ್ಬರನ್ನ ಬೆಳೆಸಲಾಗುತ್ತಿದೆ. 2011 ರಲ್ಲಿ 242 ರೂಪಾಯಿ ಇದ್ದ ನೈ ಸರ್ಗಿಕ ರಬ್ಬರ್ ಬೆಲೆ ಸದ್ಯ 140
ರೂಪಾಯಿಯ ಆಸುಪಾಸಿನಲ್ಲಿದ್ದು ಉತ್ಪಾದನಾ ವೆಚ್ಚಕ್ಕಿಂತಲೂ ಕಡಿಮೆಯಾಗಿದೆ. ನಿರಂತರ ದರ ಕುಸಿತದಿಂದ ರೈತರ ಜೀವನಲ್ಲಿ ಅಭದ್ರತೆ ಕಾಡುತ್ತಿದೆ.

ಕೇರಳದಲ್ಲಿಯೂ ಕೂಡ ರಬ್ಬರ್ ಬೆಳೆಗಾರರು ಸಂಕಷ್ಟಗಳನ್ನು ಅನುಭವಿಸುತ್ತಿದ್ದು,ಅಲ್ಲಿನ ಸರಕಾರ ಬೆಳೆಗಾರರನ್ನು ರಕ್ಷಿಸಲು
ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋ ಜನೆ ಜಾರಿಗೆ ತಂದಿದೆ.ಈ ಯೋಜನೆಯ ಮೂಲಕ ರಬ್ಬರ್ ನ  ವೈ ವಿದ್ಯತೆಗೆ 170 ರೂಪಾಯಿ ಕನಿಷ್ಟ ಬೆಲೆಯನ್ನು ನಿಗದಿಪಡಿಸಿದೆ.ಮಾರುಕಟ್ಟೆಯ ದೈನಂದಿನ ಖರೀದಿ ದರ ಮತ್ತು ಸರಕಾರ ನಿಗದಿಪಡಿಸಿದ ದರ  ವ್ಯತ್ಯಾ ಸದ ಮೊತ್ತವನ್ನು ನೇ ರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಿದೆ.ಈ ಸೌಲಭ್ಯ ಪಡೆಯಲು ರೈತರು ರಬ್ಬರ್ ಸೊಸೈಟಿ ಅಥವಾ ರಬ್ಬರ್ ಬೋರ್ಡ್ ನ ಅಧಿಕಾರಿ ಪ್ರಾಮಾಣೀಕರಿಸಿದ ಖರೀದಿ ರಶೀದಿಯನ್ನು ಒದಗಿಸಬೇ ಕಾಗುತ್ತದೆ. ಅಲ್ಲಿನ ಸರಕಾರದ ಈ ಯೋಜನೆ ರಬ್ಬರ್ ಧಾರಣೆಯ ಉತ್ತೇಜನಕ್ಕೆ ಪ್ರೇರಣೆ ನೀ ಡಲಿದೆ.ಇದೇ ರೀ ತಿಯ ಯೋಜನೆಯನ್ನು ಕರ್ನಾಟಕದಲ್ಲೂ ಅನುಷ್ಠಾನಕ್ಕೆ ತರಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

50 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago