#Arecanut | ಅಡಿಕೆ ಕಳ್ಳಸಾಗಾಣಿಕೆ ಭೇದಿಸಿದ ಡಿಆರ್‌ಐ | ಕ್ಯಾಂಪ್ಕೋ ಶ್ಲಾಘನೆ |

August 10, 2023
4:37 PM
ಡ್ರೈಫ್ರುಟ್ಸ್‌ ಗಳ  ಹೆಸರಿನಲ್ಲಿ ಹಾಗೂ ಬೇರೆಬೇರೆ ರೂಪದಲ್ಲಿ ವಿದೇಶಗಳಿಂದ ಕಳ್ಳಸಾಗಾಣಿಕೆ ಮೂಲಕ ಭಾರತೀಯ ಮಾರುಕಟ್ಟೆಗೆ ಅಡಿಕೆ ಲಗ್ಗೆ ಇಡುತ್ತಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಕಾರ್ಯವನ್ನು ಕ್ಯಾಂಪ್ಕೋ ಶ್ಲಾಘಿಸಿದೆ.

ಡ್ರೈಫ್ರುಟ್ಸ್‌ ಗಳ  ಹೆಸರಿನಲ್ಲಿ ಹಾಗೂ ಬೇರೆಬೇರೆ ರೂಪದಲ್ಲಿ ವಿದೇಶಗಳಿಂದ ಕಳ್ಳಸಾಗಾಣಿಕೆ ಮೂಲಕ ಭಾರತೀಯ ಮಾರುಕಟ್ಟೆಗೆ ಅಡಿಕೆ ಲಗ್ಗೆ ಇಡುತ್ತಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಕಾರ್ಯವನ್ನು ಕ್ಯಾಂಪ್ಕೋ ಶ್ಲಾಘಿಸಿದೆ.

Advertisement
Advertisement
ಕಿಶೋರ್‌ ಕುಮಾರ್‌ ಕೊಡ್ಗಿ

ವಿದೇಶಿ ಅಡಿಕೆಯು ಡ್ರೈಫ್ರುಟ್ಸ್‌ ಗಳ ನೆಪದಲ್ಲಿ ಅಡಿಕೆಯನ್ನು ಕಳ್ಳಸಾಗಾಣಿಕೆ ಮಾಡಲಾಗುತ್ತಿತ್ತು. ಭಾರತೀಯ ಅಡಿಕೆ ಮಾರುಕಟ್ಟೆಯ ಮೇಲೆ ಈ ಅಡಿಕೆಯು ಪರಿಣಾಮ ಬೀರುತ್ತಿತ್ತು.  ಅಡಿಕೆ ಸ್ಥಿರಧಾರಣೆಯ ಮೇಲೂ ಪರಿಣಾಮ ಬೀರುತ್ತಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕ್ಯಾಂಪ್ಕೋ ಸೂಕ್ತ ಮಾಹಿತಿಗಳನ್ನು ಕಾಲ ಕಾಲಕ್ಕೆ ನೀಡುತ್ತಾ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿತ್ತು.

Advertisement
Advertisement

ಈ ಬಗ್ಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಪತ್ರ ಮುಖೇನ ಮನವಿ ಮಾಡಿದ್ದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆಯ ಮೂಲಕವೂ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಕಳ್ಳಸಾಗಾಣಿಕೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆಯನ್ನೂ ಕೇಂದ್ರ ಸರ್ಕಾರ ನೀಡಿದೆ.ಕೇಂದ್ರದ ಕೃಷಿ,ಕಂದಾಯ , ವಾಣಿಜ್ಯ ಹಾಗೂ ಹಣಕಾಸು ಸಚಿವರುಗಳು ಆಯಾ ಇಲಾಖೆಗಳಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನಗಳನ್ನು ನೀಡಿರುತ್ತಾರೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರಕಾರದ ನಿರ್ದೇಶನದಂತೆ ಆದಾಯ ಗುಪ್ತಚರ ನಿರ್ದೇಶನಾಲಯ (DRI), ಕಟ್ಟುನಿಟ್ಟಾಗಿ ತಪಾಸಣೆ ನಡೆಸುತ್ತಿದೆ. ಪರಿಣಾಮವಾಗಿ ಡ್ರೈಫ್ರುಟ್ಸ್ ಹೆಸರಿನಲ್ಲಿ ಬರುವ ವಿದೇಶಿ ಅಡಿಕೆಯನ್ನು ತಡೆಹಿಡಿದು ತಪಾಸಣೆ ನಡೆಸಿ ವಶಪಡಿಸಿಕೊಳ್ಳುತ್ತಿರುವುದರ ಬಗ್ಗೆ ಕ್ಯಾಂಪ್ಕೊ ಸಂತಸ ವ್ಯಕ್ತಪಡಿಸುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement

ವಿದೇಶದಿಂದ ಬೇರೆಬೇರೆ ಆಹಾರ ಪದಾರ್ಥಗಳ ಹೆಸರಿನಲ್ಲಿ ಆಮದು ಮಾಡುವ ಅಡಿಕೆಯನ್ನು ತಡೆದು ವಶಪಡಿಸಿಕೊಳ್ಳಲು ಕೇಂದ್ರದ ನಿರ್ದೇಶನವನ್ನು ಕಟ್ಟನಿಟ್ಟಾಗಿ ಜಾರಿಗೆ ತಂದಿರುವುದರ ಕಾರಣ, ಅಡಿಕೆಯ ಕಳ್ಳಸಾಗಾಣಿಕೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.ಇದರಿಂದ ಅಡಿಕೆಯ ಧಾರಣೆಯಲ್ಲಿ ಸ್ಥಿರತೆ ಕಾಣಲು ಸಾಧ್ಯವಾಗಿದೆ ಎಂದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಇದು ಡಿಸೆಂಬರ್ ತಿಂಗಳು ಅಷ್ಟೇ. ಇನ್ನು ಏಪ್ರಿಲ್, ಮೇ ತಿಂಗಳಲ್ಲಿ ತಾಪ, ಉರಿ ಬಿಸಿಲು ಹೇಗಿರಬಹುದು?
December 8, 2023
3:39 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಶ್ರೀರಾಮನ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” : ಯಾರು ಈತ..? ಎಲ್ಲಿಯ ಹುಡುಗ..?
December 8, 2023
3:18 PM
by: The Rural Mirror ಸುದ್ದಿಜಾಲ
ಮಧುಮೇಹಕ್ಕೆ ಕೇವಲ ಸಿಹಿ ತಿಂಡಿಗಳೇ ಕಾರಣವಲ್ಲ… : ಹಾಗಾದರೆ ಸಕ್ಕರೆ ಕಾಯಿಲೆ ಬರಲು ಕಾರಣವೇನು..?
December 8, 2023
3:01 PM
by: The Rural Mirror ಸುದ್ದಿಜಾಲ
ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ |
December 8, 2023
2:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror