Advertisement
ಸುದ್ದಿಗಳು

#arecanut | ಮಾರುಕಟ್ಟೆಗೆ ಬಂದಿದೆ ಅಡಿಕೆ “ಸೌಗಂಧ್‌ ” | ಗಮನಸೆಳೆದ ಕ್ಯಾಂಪ್ಕೋ ಅಡಿಕೆ ಉತ್ಪನ್ನ | ಅಡಿಕೆ ಬಳಕೆ ಮಾರುಕಟ್ಟೆ ಏರಿಕೆಗೂ ಕಾರಣ…! |

Share

ಅಡಿಕೆಯು ಮಲೆನಾಡು ಹಾಗೂ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಅಡಿಕೆಯನ್ನು ದೇಶದ ಬಹುಪಾಲು ಕಡೆಗಳಲ್ಲಿ  ಜಗಿಯುವುದಕ್ಕೆ ಬಳಸುತ್ತಾರೆ. ಆದರೆ ಅಡಿಕೆ ಬೆಳೆಯುವ ನಾಡಿನಲ್ಲಿ ಅಡಿಕೆ ಉಪಯೋಗವೇ ಕಡಿಮೆ ಎಂಬ ಹಂತದಲ್ಲಿತ್ತು. ಬೀಡ ಹಾಗೂ ಪಾನ್‌ ಗಳಲ್ಲಿ ಮಾತ್ರಾ ಅಡಿಕೆ ಬಳಕೆಯಾಗುತ್ತಿತ್ತು. ಕೆಲವು ಹಿರಿಯರು ಹಾಗೂ ಧಾರ್ಮಿಕ ಆಚರಣೆಗಳಲ್ಲಿ ಬಳಕೆ ಆಗುತ್ತಿತ್ತು. ಇದೀಗ ಕರಾವಳಿ ಸಹಿತ ಎಲ್ಲಾ ಜನರೂ ಬಳಕೆ ಮಾಡುವಂತಹ ಅಡಿಕೆಯ ಉತ್ಪನ್ನವನ್ನು ಕ್ಯಾಂಪ್ಕೋ ಬಿಡುಗಡೆ ಮಾಡಿದೆ. ಸದ್ಯ ಸ್ಥಳೀಯ ಮಾರುಕಟ್ಟೆಗಳಲ್ಲಿ ಲಭ್ಯವಿರುವ ಈ ಉತ್ಪನ್ನ “ಸೌಗಂಧ್‌ “

Advertisement
Advertisement
Advertisement
Advertisement

ಅಡಿಕೆ ಬೆಳೆಯುವ ನಾಡಿನಲ್ಲಿ ಕೂಡಾ ಅಡಿಕೆ ಬಳಕೆಯಾಗಬೇಕು ಎನ್ನುವ ಬೇಡಿಕೆ, ಚಿಂತನೆ  ಹಲವು ಸಮಯಗಳಿಂದಲೂ ವ್ಯಕ್ತವಾಗುತ್ತಿತ್ತು. ಆದರೆ ಬೀಡಾ ಮಾದರಿಯಲ್ಲಿ, ಪಾನ್‌ ಮಾದರಿಯಲ್ಲಿ ಅಡಿಕೆ ಬಳಕೆ ಮಾಡುವುದಕ್ಕೆ ಹಲವು ಮಂದಿ ಸಮ್ಮತಿ ತೋರಿಸಿರಲಿಲ್ಲ. ಆದರೆ ದೇಶದ ಹಲವು ಕಡೆಗಳಲ್ಲಿ ಅಡಿಕೆಯನ್ನು ಪಾನ್‌ ಮೂಲಕ ಉಪಯೋಗಿಸುತ್ತಾರೆ. ಕೆಲವು ಅಡಿಕೆಯನ್ನು ಗುಟ್ಕಾ, ಪಾನ್‌ ಮಸಾಲಾಗಳಲ್ಲೂ ಉಪಯೋಗ ಮಾಡುತ್ತಾರೆ. ಆರೋಗ್ಯಕ್ಕೆ ಹಾನಿಕರ ಇಲ್ಲದೆಯೇ ಅಡಿಕೆಯನ್ನು ಬಳಕೆ ಮಾಡುವುದಕ್ಕೆ ಸಾಧ್ಯವಿದೆ ಎಂದು ಹಲವು ಸಂಶೋಧನೆಗಳೂ ಹೇಳಿದೆ. ದೇಶದ ಸಾಂಬಾರ ಮಂಡಳಿ ಹಾಗೂ ಆಹಾರ ಸುರಕ್ಷತಾ ವಿಭಾಗವೂ ಅಡಿಕೆ ಮಾತ್ರಾ ಜಗಿಯುವುದು  ಆರೋಗ್ಯ ಉತ್ತಮ ಎಂದೂ ಹೇಳಿರುವ ವರದಿಗಳು ಬಂದಿತ್ತು. ಈ ಎಲ್ಲದರ ನಡುವೆಯೇ ಕ್ಯಾಂಪ್ಕೋ ಎಲ್ಲರೂ ಉಪಯೋಗಿಸಬಹುದಾದಂತಹ ಅಡಿಕೆ ಉತ್ಪನ್ನವನ್ನು ತಯಾರು ಮಾಡಿದೆ. ಈ ಹಿಂದೆ ಕಾಜುಸುಪಾರಿ ಎಂಬ ಹೆಸರಿನಲ್ಲಿ ಅಡಿಕೆ ಉತ್ಪನ್ನ ಬಿಡುಗಡೆ ಮಾಡಿತ್ತು. ಆ ಬಳಿಕ ಕೆಲವು ಕಾರಣಗಳಿಂದ ಉತ್ಪಾದನೆ ಸ್ಥಗಿತ ಮಾಡಲಾಗಿತ್ತು. ಇದೀಗ ಮತ್ತೆ ಕ್ಯಾಂಪ್ಕೋ ಹೊಸ ಹೆಜ್ಜೆ ಇಟ್ಟಿರುವುದು  ಅಡಿಕೆ ಬೆಳೆಗಾರರಿಗೂ ಆಶಾದಾಯಕ.

Advertisement

ಯಾವುದೇ ರಾಸಾಯನಿಕ ಬಳಸದೆ “ಸೌಂಗಧ್‌” ಹೆಸರಿನಲ್ಲಿ ಬಿಡುಗಡೆ ಮಾಡಿರುವ ಈ ಅಡಿಕೆ ಉತ್ಪನ್ನವು, ಅಡಿಕೆಯ ಹುಡಿಯಿಂದ ಕೂಡಿದೆ. ಇದನ್ನು ಮೌತ್‌ ಫ್ರೆಶ್‌ನರ್‌ ಆಗಿಯೂ ಬಳಕೆ ಮಾಡಬಹುದು.ಇದರಲ್ಲಿ ಅಡಿಕೆಯನ್ನು ತೆಳುವಾಗಿ ಕತ್ತರಿಸಿ ಇದಕ್ಕೆ ಲವಂಗ, ಏಲಕ್ಕಿ ಸೇರಿದಂತೆ ಇತರ ವಸ್ತುಗಳ ಜೊತೆ ಫ್ರೈ ಮಾಡಲಾಗಿದೆ. ಹೀಗಾಗಿ ಬಾಯಿ ಸುವಾಸನೆ ಹಾಗೂ ಸಿಹಿಯಾಗಿದ್ದು ರುಚಿಕರವಾಗಿಯೂ ಇದೆ.ಸದ್ಯ 80 ಗ್ರಾಂ ಜಾರ್‌ಗಳಲ್ಲಿ ಲಭ್ಯವಿದ್ದು 100 ರೂಪಾಯಿ ದರ ನಿಗದಿಪಡಿಸಲಾಗಿದೆ. ಈಗ ಸ್ಥಳೀಯ ಮಾರುಕಟ್ಟೆಗಳಲ್ಲಿ ಈ ಸೌಗಂಧ್‌ ಮಾರಾಟಕ್ಕಿದೆ. ಕೃಷಿಕರ ಹಾಗೂ ಸಾರ್ವಜನಿಕರ ಬೇಡಿಕೆಗಳನ್ನು ಗಮನಿಸಿಕೊಂಡು ಕ್ಯಾಂಪ್ಕೋ ಈ ಉತ್ಪನ್ನವನ್ನು ವಿಸ್ತಾರ ಮಾಡುವ ಯೋಜನೆಯನ್ನು ಹೊಂದಿದೆ. ಮುಂದಿನ ಮಹಾಸಭೆಯಲ್ಲಿ ಈ ಉತ್ಪನ್ನವನ್ನು ಕ್ಯಾಂಪ್ಕೋ ಅಧಿಕೃತವಾಗಿ ಬಿಡುಗಡೆ ಕೂಡಾ ಮಾಡಲಿದೆ. ಈ ಉತ್ಪನ್ನವನ್ನು ಸಭೆ, ಸಮಾರಂಭಗಳಲ್ಲಿ ಪಾನ್‌ ಜೊತೆ ಬಳಕೆ ಮಾಡಬಹುದಾಗಿದೆ. ಈ ಕಾರಣದಿಂದ ಸೌಗಂಧ್‌ ಮಾರುಕಟ್ಟೆಯಲ್ಲಿ ಸ್ಥಾನಪಡೆಯುವ ಸಾಧ್ಯತೆ ಇದೆ.

ಈಗಾಗಲೇ ಅಡಿಕೆಯ ಉತ್ಪನ್ನವಾದ ಸೌಗಂಧ್‌ ಸ್ಥಳೀಯ ಮಾರುಕಟ್ಟೆಗಳಲ್ಲಿ ಬಿಡಲಾಗಿದೆ. 80 ಗ್ರಾಂ ಜಾರ್‌ಗೆ 100 ರೂಪಾಯಿ ನಿಗದಿ ಮಾಡಲಾಗಿದೆ. ಸ್ಥಳೀಯ ಮಾರುಕಟ್ಟೆಯ ಫೀಡ್‌ ಬ್ಯಾಕ್‌ ಹಾಗೂ ಬೇಡಿಕೆಯನ್ನು ಗಮನಿಸಿಕೊಂಡು ಮುಂದೆ ಪ್ರತ್ಯೇಕ ವಿಭಾಗದ ಮೂಲಕವೇ ಸೌಗಂಧ್‌ ಬಿಡುಗಡೆ ಮಾಡಲಾಗುತ್ತದೆ.
ಕೃಷ್ಣ ಕುಮಾರ್‌ , ಕ್ಯಾಂಪ್ಕೋ ಎಂಡಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

3 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

3 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

3 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

3 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

10 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

11 hours ago