Advertisement
ಸುದ್ದಿಗಳು

#arecanut | ಮಾರುಕಟ್ಟೆಗೆ ಬಂದಿದೆ ಅಡಿಕೆ “ಸೌಗಂಧ್‌ ” | ಗಮನಸೆಳೆದ ಕ್ಯಾಂಪ್ಕೋ ಅಡಿಕೆ ಉತ್ಪನ್ನ | ಅಡಿಕೆ ಬಳಕೆ ಮಾರುಕಟ್ಟೆ ಏರಿಕೆಗೂ ಕಾರಣ…! |

Share

ಅಡಿಕೆಯು ಮಲೆನಾಡು ಹಾಗೂ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಅಡಿಕೆಯನ್ನು ದೇಶದ ಬಹುಪಾಲು ಕಡೆಗಳಲ್ಲಿ  ಜಗಿಯುವುದಕ್ಕೆ ಬಳಸುತ್ತಾರೆ. ಆದರೆ ಅಡಿಕೆ ಬೆಳೆಯುವ ನಾಡಿನಲ್ಲಿ ಅಡಿಕೆ ಉಪಯೋಗವೇ ಕಡಿಮೆ ಎಂಬ ಹಂತದಲ್ಲಿತ್ತು. ಬೀಡ ಹಾಗೂ ಪಾನ್‌ ಗಳಲ್ಲಿ ಮಾತ್ರಾ ಅಡಿಕೆ ಬಳಕೆಯಾಗುತ್ತಿತ್ತು. ಕೆಲವು ಹಿರಿಯರು ಹಾಗೂ ಧಾರ್ಮಿಕ ಆಚರಣೆಗಳಲ್ಲಿ ಬಳಕೆ ಆಗುತ್ತಿತ್ತು. ಇದೀಗ ಕರಾವಳಿ ಸಹಿತ ಎಲ್ಲಾ ಜನರೂ ಬಳಕೆ ಮಾಡುವಂತಹ ಅಡಿಕೆಯ ಉತ್ಪನ್ನವನ್ನು ಕ್ಯಾಂಪ್ಕೋ ಬಿಡುಗಡೆ ಮಾಡಿದೆ. ಸದ್ಯ ಸ್ಥಳೀಯ ಮಾರುಕಟ್ಟೆಗಳಲ್ಲಿ ಲಭ್ಯವಿರುವ ಈ ಉತ್ಪನ್ನ “ಸೌಗಂಧ್‌ “

ಅಡಿಕೆ ಬೆಳೆಯುವ ನಾಡಿನಲ್ಲಿ ಕೂಡಾ ಅಡಿಕೆ ಬಳಕೆಯಾಗಬೇಕು ಎನ್ನುವ ಬೇಡಿಕೆ, ಚಿಂತನೆ  ಹಲವು ಸಮಯಗಳಿಂದಲೂ ವ್ಯಕ್ತವಾಗುತ್ತಿತ್ತು. ಆದರೆ ಬೀಡಾ ಮಾದರಿಯಲ್ಲಿ, ಪಾನ್‌ ಮಾದರಿಯಲ್ಲಿ ಅಡಿಕೆ ಬಳಕೆ ಮಾಡುವುದಕ್ಕೆ ಹಲವು ಮಂದಿ ಸಮ್ಮತಿ ತೋರಿಸಿರಲಿಲ್ಲ. ಆದರೆ ದೇಶದ ಹಲವು ಕಡೆಗಳಲ್ಲಿ ಅಡಿಕೆಯನ್ನು ಪಾನ್‌ ಮೂಲಕ ಉಪಯೋಗಿಸುತ್ತಾರೆ. ಕೆಲವು ಅಡಿಕೆಯನ್ನು ಗುಟ್ಕಾ, ಪಾನ್‌ ಮಸಾಲಾಗಳಲ್ಲೂ ಉಪಯೋಗ ಮಾಡುತ್ತಾರೆ. ಆರೋಗ್ಯಕ್ಕೆ ಹಾನಿಕರ ಇಲ್ಲದೆಯೇ ಅಡಿಕೆಯನ್ನು ಬಳಕೆ ಮಾಡುವುದಕ್ಕೆ ಸಾಧ್ಯವಿದೆ ಎಂದು ಹಲವು ಸಂಶೋಧನೆಗಳೂ ಹೇಳಿದೆ. ದೇಶದ ಸಾಂಬಾರ ಮಂಡಳಿ ಹಾಗೂ ಆಹಾರ ಸುರಕ್ಷತಾ ವಿಭಾಗವೂ ಅಡಿಕೆ ಮಾತ್ರಾ ಜಗಿಯುವುದು  ಆರೋಗ್ಯ ಉತ್ತಮ ಎಂದೂ ಹೇಳಿರುವ ವರದಿಗಳು ಬಂದಿತ್ತು. ಈ ಎಲ್ಲದರ ನಡುವೆಯೇ ಕ್ಯಾಂಪ್ಕೋ ಎಲ್ಲರೂ ಉಪಯೋಗಿಸಬಹುದಾದಂತಹ ಅಡಿಕೆ ಉತ್ಪನ್ನವನ್ನು ತಯಾರು ಮಾಡಿದೆ. ಈ ಹಿಂದೆ ಕಾಜುಸುಪಾರಿ ಎಂಬ ಹೆಸರಿನಲ್ಲಿ ಅಡಿಕೆ ಉತ್ಪನ್ನ ಬಿಡುಗಡೆ ಮಾಡಿತ್ತು. ಆ ಬಳಿಕ ಕೆಲವು ಕಾರಣಗಳಿಂದ ಉತ್ಪಾದನೆ ಸ್ಥಗಿತ ಮಾಡಲಾಗಿತ್ತು. ಇದೀಗ ಮತ್ತೆ ಕ್ಯಾಂಪ್ಕೋ ಹೊಸ ಹೆಜ್ಜೆ ಇಟ್ಟಿರುವುದು  ಅಡಿಕೆ ಬೆಳೆಗಾರರಿಗೂ ಆಶಾದಾಯಕ.

ಯಾವುದೇ ರಾಸಾಯನಿಕ ಬಳಸದೆ “ಸೌಂಗಧ್‌” ಹೆಸರಿನಲ್ಲಿ ಬಿಡುಗಡೆ ಮಾಡಿರುವ ಈ ಅಡಿಕೆ ಉತ್ಪನ್ನವು, ಅಡಿಕೆಯ ಹುಡಿಯಿಂದ ಕೂಡಿದೆ. ಇದನ್ನು ಮೌತ್‌ ಫ್ರೆಶ್‌ನರ್‌ ಆಗಿಯೂ ಬಳಕೆ ಮಾಡಬಹುದು.ಇದರಲ್ಲಿ ಅಡಿಕೆಯನ್ನು ತೆಳುವಾಗಿ ಕತ್ತರಿಸಿ ಇದಕ್ಕೆ ಲವಂಗ, ಏಲಕ್ಕಿ ಸೇರಿದಂತೆ ಇತರ ವಸ್ತುಗಳ ಜೊತೆ ಫ್ರೈ ಮಾಡಲಾಗಿದೆ. ಹೀಗಾಗಿ ಬಾಯಿ ಸುವಾಸನೆ ಹಾಗೂ ಸಿಹಿಯಾಗಿದ್ದು ರುಚಿಕರವಾಗಿಯೂ ಇದೆ.ಸದ್ಯ 80 ಗ್ರಾಂ ಜಾರ್‌ಗಳಲ್ಲಿ ಲಭ್ಯವಿದ್ದು 100 ರೂಪಾಯಿ ದರ ನಿಗದಿಪಡಿಸಲಾಗಿದೆ. ಈಗ ಸ್ಥಳೀಯ ಮಾರುಕಟ್ಟೆಗಳಲ್ಲಿ ಈ ಸೌಗಂಧ್‌ ಮಾರಾಟಕ್ಕಿದೆ. ಕೃಷಿಕರ ಹಾಗೂ ಸಾರ್ವಜನಿಕರ ಬೇಡಿಕೆಗಳನ್ನು ಗಮನಿಸಿಕೊಂಡು ಕ್ಯಾಂಪ್ಕೋ ಈ ಉತ್ಪನ್ನವನ್ನು ವಿಸ್ತಾರ ಮಾಡುವ ಯೋಜನೆಯನ್ನು ಹೊಂದಿದೆ. ಮುಂದಿನ ಮಹಾಸಭೆಯಲ್ಲಿ ಈ ಉತ್ಪನ್ನವನ್ನು ಕ್ಯಾಂಪ್ಕೋ ಅಧಿಕೃತವಾಗಿ ಬಿಡುಗಡೆ ಕೂಡಾ ಮಾಡಲಿದೆ. ಈ ಉತ್ಪನ್ನವನ್ನು ಸಭೆ, ಸಮಾರಂಭಗಳಲ್ಲಿ ಪಾನ್‌ ಜೊತೆ ಬಳಕೆ ಮಾಡಬಹುದಾಗಿದೆ. ಈ ಕಾರಣದಿಂದ ಸೌಗಂಧ್‌ ಮಾರುಕಟ್ಟೆಯಲ್ಲಿ ಸ್ಥಾನಪಡೆಯುವ ಸಾಧ್ಯತೆ ಇದೆ.

ಈಗಾಗಲೇ ಅಡಿಕೆಯ ಉತ್ಪನ್ನವಾದ ಸೌಗಂಧ್‌ ಸ್ಥಳೀಯ ಮಾರುಕಟ್ಟೆಗಳಲ್ಲಿ ಬಿಡಲಾಗಿದೆ. 80 ಗ್ರಾಂ ಜಾರ್‌ಗೆ 100 ರೂಪಾಯಿ ನಿಗದಿ ಮಾಡಲಾಗಿದೆ. ಸ್ಥಳೀಯ ಮಾರುಕಟ್ಟೆಯ ಫೀಡ್‌ ಬ್ಯಾಕ್‌ ಹಾಗೂ ಬೇಡಿಕೆಯನ್ನು ಗಮನಿಸಿಕೊಂಡು ಮುಂದೆ ಪ್ರತ್ಯೇಕ ವಿಭಾಗದ ಮೂಲಕವೇ ಸೌಗಂಧ್‌ ಬಿಡುಗಡೆ ಮಾಡಲಾಗುತ್ತದೆ.
ಕೃಷ್ಣ ಕುಮಾರ್‌ , ಕ್ಯಾಂಪ್ಕೋ ಎಂಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

12 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

13 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

21 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago