ಜ.10 ರಿಂದ ವಿಟ್ಲದಲ್ಲಿ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರ | ಕಾರ್ಬನ್ ಫೈಬರ್ ದೋಟಿ ಮೂಲಕ ಕೊಯ್ಲು – ಸಿಂಪಡಣೆಗಳ ತರಬೇತಿ |

January 8, 2022
2:56 PM

ಕ್ಯಾಂಪ್ಕೋ ನೇತೃತ್ವದಲ್ಲಿ ಜ.10 ರಿಂದ ವಿಟ್ಲದ ಸಿಪಿಸಿಆರ್‌ಐಯಲ್ಲಿ ಸಹಸಂಸ್ಥೆಗಳ ಜತೆ ಸೇರಿ ಕ್ಯಾಂಪ್ಕೋ ಜ.10 ರಿಂದ 12 ರ ವರೆಗೆ ವಿಟ್ಲ ಸಿಪಿಸಿಆರ್‌ ಐ ಯಲ್ಲಿ ಕಾರ್ಬನ್ ಫೈಬರ್ ದೋಟಿ ಮೂಲಕ ಕೊಯ್ಲು – ಸಿಂಪಡಣೆಗಳ ತರಬೇತಿ ನಡೆಯಲಿದೆ. ಶಿಬಿರವನ್ನು ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿನಿರ್ದೇಶಕ ಎಸ್‌ ಆರ್‌ ಸತೀಶ್ಚಂದ್ರ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ವಹಿಸುವರು.

ಕ್ಯಾಂಪ್ಕೋ ಆಡಳಿತ ನಿರ್ದೇಶಕ ಎಚ್‌ ಎಂ ಕೃಷ್ಣಕುಮಾರ್‌ , ವಿಟ್ಲ ಸಿಪಿಸಿಆರ್‌ಐ ಮುಖ್ಯಸ್ಥ ಡಾ. ಸಿ ಟಿ ಜೋಸ್, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕ್ಯಾಂಪ್ಕೋ ನಿರ್ದೇಶಕರುಗಳು ಉಪಸ್ಥಿತರಿರುವರು. ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ ಪ್ರಸ್ತಾವನೆಗೈಯಲಿದ್ದಾರೆ.  ಶಿಬಿರದಲ್ಲಿ ಔಷಧಿ ಸಿಂಪಡಣಾ ಕ್ರಮಗಳ ಬಗ್ಗೆ ಸಿಪಿಸಿಆರ್ ಐ ವಿಜ್ಞಾನಿ ಡಾ.ಭವಿಷ್ಯ ಅವರ ತಂಡ ಮಾಹಿತಿ ನೀಡುವರು.

ಜ.12 ರಂದು ಅಪರಾಹ್ಣ 2.3೦ ರಿಂದ ಸೊಸೈಟಿ ಪ್ರಮುಖರೊಡನೆ  ಸಂವಾದ ಕಾರ್ಯಕ್ರಮ ನಡೆಯಲಿದ್ದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ನಿರ್ವಹಣೆ ಮಾಡುವರು. ಬಳಿಕ ಶಿಬಿರದ ಸಮಾರೋಪ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಿಪಿಸಿಆರ್‌ಐ ನಿರ್ದೇಶಕಿ ಡಾ.ಅನಿತಾ ಕರುಣ್‌ ವಹಿಸಿಸುವರು.

ಅತಿಥಿಗಳಾಗಿ ಮಲೆನಾಡು ಕೃಷಿಕ ಸಮುದಾಯ ಸಂಘಟನೆ ಅಧ್ಯಕ್ಷ ಸತ್ಯನಾರಾಯಣ ಕೂಳೂರು ಭಾಗವಹಿಸುವರು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹಾಗೂ ಕ್ಯಾಂಪ್ಕೋ ನಿರ್ದೇಶಕರುಗಳು,  ಅಡಿಕೆ ಪತ್ರಿಕೆ ಪ್ರಕಾಶಕ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಶಾಸ್ತ್ರಿ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ಉಪಸ್ಥಿತರಿರುವರು. ಶಿಬಿರದ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಆಸಕ್ತರು ಸಂಘಟಕರಿಗೆ ಪೂರ್ವ ಮಾಹಿತಿ ನೀಡಿ ಆಗಮಿಸಲು ಶಿಬಿರ ನಿರ್ದೇಶಕ ಶಂ ನಾ ಖಂಡಿಗೆ ತಿಳಿಸಿದ್ದಾರೆ. ಆಗಮಿಸುವ ಆಸಕ್ತ ಕೃಷಿಕರು ಕ್ಯಾಂಪ್ಕೋ ಸಿಬಂದಿ ಈಶ್ವರ ನಾಯ್ಕ್ ಅವರಿಗೆ ಮಾಹಿತಿ ನೀಡಲು ಕೋರಲಾಗಿದೆ. ಸಂಪರ್ಕ 9449332906. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror