ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

May 14, 2021
4:22 PM

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ  ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.

ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ.  ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.

ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್‌  ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror