ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.
ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ. ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.
ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…