ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.
ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ. ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.
ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…