Advertisement
ಸುದ್ದಿಗಳು

ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

Share

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ  ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.

ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ.  ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.

ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್‌  ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

4 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

5 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

2 days ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago