Advertisement
ಸುದ್ದಿಗಳು

ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

Share

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ  ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.

ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ.  ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.

ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್‌  ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago