ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.
ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ. ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.
ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…