ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.
ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ. ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.
ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…