Advertisement
ಸುದ್ದಿಗಳು

ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

Share

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ  ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.

ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ.  ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.

ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್‌  ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

13 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

15 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

16 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

16 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

16 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago