ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆ ಅಂತರಾಷ್ಟ್ರೀಯ ಮಟ್ಟಕ್ಕೆ

March 29, 2025
11:04 PM
ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್‌ ಅಡಿಕೆ" ಗೆ ಪ್ರತ್ಯೇಕವಾದ ಸ್ಥಾನಮಾನ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ.

ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆಯನ್ನು ಜಾಗತಿಕ ಮಟ್ಟದಲ್ಲಿ ಸ್ಥಾನ ಪಡೆಯುವಂತೆ ಮಾಡುವ ಉದ್ದೇಶದೊಂದಿಗೆ ಕ್ಯಾಂಪ್ಕೋ ತನ್ನ ಅಡಿಕೆ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿ ಗುಣಮಟ್ಟದ 30 ಟನ್ ಅಡಿಕೆಯನ್ನು ‌ ಮಾಲ್ಡೀವ್ಸ್‌ಗೆ ರಫ್ತು ಮಾಡಿದೆ.……..ಮುಂದೆ ಓದಿ…..

ಅಡಿಕೆಯ ವಿವಿಧ ಸವಾಲುಗಳ ನಡುವೆ ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯಲ್ಲಿ ತನ್ನದೇ ಸ್ಥಾನವನ್ನು ಪಡೆಯುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಕ್ಯಾಂಪ್ಕೋ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದವರೆಗೂ ಇದೇ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಈ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ ಕ್ಯಾಂಪ್ಕೋ ಬ್ರಾಂಡ್‌ ಅಡಿಕೆಗೆ ಪ್ರತ್ಯೇಕವಾದ ಸ್ಥಾನಮಾನ ಪಡೆಯಲು ಪ್ರಯತ್ನ ನಡೆಸುತ್ತಿದೆ.

ಮುಂದಿನ ದಿನಗಳಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಅಡಿಕೆ ಮತ್ತು ಅಡಿಕೆಯ ಉತ್ಪನ್ನಗಳನ್ನು ರಫ್ತು ಮಾಡುವ ಸಾಧ್ಯತೆಗಳನ್ನು ಅನ್ವೇಶಿಸಿ ,ಅಡಿಕೆ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಕಾರ್ಯಕ್ಕೆ ಸಂಸ್ಥೆ ಇನ್ನಷ್ಟು ಪ್ರಯತ್ನಿಸಲಿದೆ. ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ಕ್ಯಾಂಪ್ಕೋ ಪ್ರಯತ್ನ ಪಡುವುದಾಗಿ ಸಂಸ್ಥೆಯ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror