Advertisement
ಕೃಷಿ

ಕ್ಯಾಂಪ್ಕೋ ಪ್ರಕಟಣೆ | ದೋಟಿ ಕೊಯ್ಲು ತರಬೇತಿಗೆ ಅರ್ಜಿ ಆಹ್ವಾನ

Share

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಪರಿಹರಿಸಲು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೊಯ್ಲು ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ. ತರಬೇತಿ ಜನವರಿ ತಿಂಗಳ 10 ರಿಂದ 12 ರ ವರೆಗೆ ಮೂರು ದಿನ ವಿಟ್ಲ ಸಿಪಿಸಿಆರ್ ಐಯಲ್ಲಿ ನಡೆಯಲಿದೆ.

ದಕ್ಷಿಣಕನ್ನಡ ಮತ್ತುಕಾಸರಗೋಡು ಜಿಲ್ಲೆಯ 18ರಿಂದ 35 ವರ್ಷದ ಒಳಗಿನ ಯುವಕರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು ಕ್ಯಾಂಪ್ಕೋ  ಶಾಖೆಗಳಿಂದ ಪಡೆಯಬಹುದು. ಇದೇ ಫಾರ್ಮಿನ ಮಾದರಿಗಳನ್ನು ಹಲವು ವಾಟ್ಸಪ್ ಗುಂಪುಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಅದನ್ನೇ ಮುದ್ರಿಸಿ ಬಳಸಲೂಬಹುದು. ಅರ್ಜಿಯ ಜೊತೆಗೆಇತ್ತೀಚೆಗಿನ ಎರಡು ಭಾವಚಿತ್ರ, ಆಧಾರ್ ಮತ್ತು ಪಾನ್‍ ಕಾರ್ಡಿನ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು. ತುಂಬಿಸಿದ ಅರ್ಜಿ ಫಾರ್ಮನ್ನು ಕ್ಯಾಂಪ್ಕೋದ ಯಾವುದೇ ಶಾಖೆಯಲ್ಲಿ ಸಲ್ಲಿಸಬಹುದು.

ಅನುಭವಿ ತರಬೇತುದಾರರು ಫೈಬರ್‍ಕಾರ್ಬನ್‍ ದೋಟಿ ಬಳಸಿ ಅಡಿಕೆಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ತರಬೇತಿಯಲ್ಲಿ ಒಟ್ಟು 20 ಮಂದಿಗೆ ಮಾತ್ರ ಅವಕಾಶ ಇರುತ್ತದೆ. ಶಿಬಿರದ ಅವಧಿಯಲ್ಲಿಡೀ ಅಭ್ಯರ್ಥಿಗಳಿಗೆ ಶಿಬಿರ ಕೇಂದ್ರ ವಾಸ್ತವ್ಯ ಕಡ್ಡಾಯ. ಉಚಿತ ವಾಸ್ತವ್ಯ ಮತ್ತುಆಹಾರದ ಏರ್ಪಾಡು ಇದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20.

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ವಿದ್ಯೆ ಕಲಿತ ಹಲವರು ವೃತ್ತಿ ನಡೆಸುತ್ತಿದ್ದು ಬದುಕಿನಲ್ಲಿ ಪ್ರಗತಿ ಹೊಂದಿದ್ದಾರೆ. ದೋಟಿಯ ಮೂಲಕ ಕೊಯ್ಲು – ಸಿಂಪಡಣೆ ಮಾಡುವ ಕ್ರಮ ಉತ್ತರ ಕನ್ನಡದಲ್ಲಿ ಜನಪ್ರಿಯತೆ ಪಡೆಯುತ್ತಿದೆ. ಹಲವು ಹಳ್ಳಿಗಳಲ್ಲಿ ದೋಟಿ ಜಾಬ್ ವರ್ಕರುಗಳು ತಯಾರಾಗಿ ವೃತ್ತಿ ಮಾಡುತ್ತಿದ್ದಾರೆ. ಕುಮಟಾ ತಾಲೂಕಿನ ಮೂರೂರು-ಕಲ್ಲಬ್ಬೆಯಲ್ಲಿ ಕಳೆದೆರಡು ವರ್ಷಗಳಲ್ಲಿ 50ಕ್ಕೂ ಹೆಚ್ಚು ಜಾಬ್ ವರ್ಕರುಗಳು ರೂಪುಗೊಂಡು ಒಂದು ಅನನ್ಯ ಯಶೋಗಾಥೆ ಸೃಷ್ಟಿಯಾಗಿದೆ. ಈ ಮಂದಿ ವರ್ಷದ ಆರು ತಿಂಗಳ ಕಾಲ ಪ್ರತಿ ತಿಂಗಳಿಗೆ ಕನಿಷ್ಠ್ಠ 25,000 ರೂ ಆದಾಯ ಗಳಿಸುತ್ತಿದ್ದಾರೆ. ದೋಟಿ ಮೂಲಕ ಮಾಡುವ ಮರ ಗೆಲಸದಲ್ಲಿ ಅಪಾಯ ಸಾಧ್ಯತೆ ತೀರಾ ಕಡಿಮೆ ಇರುವುದು ಹೆಚ್ಚು ಹೆಚ್ಚು ಯುವಕರನ್ನು ಈ ಕೆಲಸಕ್ಕೆ ಸೆಳೆಯಹತ್ತಿದೆ.

ತರಬೇತಿಯ ಬಗ್ಗೆ ಹೆಚ್ಚಿನ ವಿವರಗಳಿಗೆ ಶಂ. ನಾ. ಖಂಡಿಗೆ( ಶಿಬಿರಾಧಿಕಾರಿ) : 99464 06321, ಈಶ್ವರ ನಾಯ್ಕ : 94493 32906 ಇವರನ್ನು ಸಂಪರ್ಕಿಸಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

6 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

18 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

19 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

19 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

19 hours ago