Advertisement
ಕೃಷಿ

ಕ್ಯಾಂಪ್ಕೋ ಪ್ರಕಟಣೆ | ದೋಟಿ ಕೊಯ್ಲು ತರಬೇತಿಗೆ ಅರ್ಜಿ ಆಹ್ವಾನ

Share

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಪರಿಹರಿಸಲು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೊಯ್ಲು ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ. ತರಬೇತಿ ಜನವರಿ ತಿಂಗಳ 10 ರಿಂದ 12 ರ ವರೆಗೆ ಮೂರು ದಿನ ವಿಟ್ಲ ಸಿಪಿಸಿಆರ್ ಐಯಲ್ಲಿ ನಡೆಯಲಿದೆ.

ದಕ್ಷಿಣಕನ್ನಡ ಮತ್ತುಕಾಸರಗೋಡು ಜಿಲ್ಲೆಯ 18ರಿಂದ 35 ವರ್ಷದ ಒಳಗಿನ ಯುವಕರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು ಕ್ಯಾಂಪ್ಕೋ  ಶಾಖೆಗಳಿಂದ ಪಡೆಯಬಹುದು. ಇದೇ ಫಾರ್ಮಿನ ಮಾದರಿಗಳನ್ನು ಹಲವು ವಾಟ್ಸಪ್ ಗುಂಪುಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಅದನ್ನೇ ಮುದ್ರಿಸಿ ಬಳಸಲೂಬಹುದು. ಅರ್ಜಿಯ ಜೊತೆಗೆಇತ್ತೀಚೆಗಿನ ಎರಡು ಭಾವಚಿತ್ರ, ಆಧಾರ್ ಮತ್ತು ಪಾನ್‍ ಕಾರ್ಡಿನ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು. ತುಂಬಿಸಿದ ಅರ್ಜಿ ಫಾರ್ಮನ್ನು ಕ್ಯಾಂಪ್ಕೋದ ಯಾವುದೇ ಶಾಖೆಯಲ್ಲಿ ಸಲ್ಲಿಸಬಹುದು.

ಅನುಭವಿ ತರಬೇತುದಾರರು ಫೈಬರ್‍ಕಾರ್ಬನ್‍ ದೋಟಿ ಬಳಸಿ ಅಡಿಕೆಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ತರಬೇತಿಯಲ್ಲಿ ಒಟ್ಟು 20 ಮಂದಿಗೆ ಮಾತ್ರ ಅವಕಾಶ ಇರುತ್ತದೆ. ಶಿಬಿರದ ಅವಧಿಯಲ್ಲಿಡೀ ಅಭ್ಯರ್ಥಿಗಳಿಗೆ ಶಿಬಿರ ಕೇಂದ್ರ ವಾಸ್ತವ್ಯ ಕಡ್ಡಾಯ. ಉಚಿತ ವಾಸ್ತವ್ಯ ಮತ್ತುಆಹಾರದ ಏರ್ಪಾಡು ಇದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20.

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ವಿದ್ಯೆ ಕಲಿತ ಹಲವರು ವೃತ್ತಿ ನಡೆಸುತ್ತಿದ್ದು ಬದುಕಿನಲ್ಲಿ ಪ್ರಗತಿ ಹೊಂದಿದ್ದಾರೆ. ದೋಟಿಯ ಮೂಲಕ ಕೊಯ್ಲು – ಸಿಂಪಡಣೆ ಮಾಡುವ ಕ್ರಮ ಉತ್ತರ ಕನ್ನಡದಲ್ಲಿ ಜನಪ್ರಿಯತೆ ಪಡೆಯುತ್ತಿದೆ. ಹಲವು ಹಳ್ಳಿಗಳಲ್ಲಿ ದೋಟಿ ಜಾಬ್ ವರ್ಕರುಗಳು ತಯಾರಾಗಿ ವೃತ್ತಿ ಮಾಡುತ್ತಿದ್ದಾರೆ. ಕುಮಟಾ ತಾಲೂಕಿನ ಮೂರೂರು-ಕಲ್ಲಬ್ಬೆಯಲ್ಲಿ ಕಳೆದೆರಡು ವರ್ಷಗಳಲ್ಲಿ 50ಕ್ಕೂ ಹೆಚ್ಚು ಜಾಬ್ ವರ್ಕರುಗಳು ರೂಪುಗೊಂಡು ಒಂದು ಅನನ್ಯ ಯಶೋಗಾಥೆ ಸೃಷ್ಟಿಯಾಗಿದೆ. ಈ ಮಂದಿ ವರ್ಷದ ಆರು ತಿಂಗಳ ಕಾಲ ಪ್ರತಿ ತಿಂಗಳಿಗೆ ಕನಿಷ್ಠ್ಠ 25,000 ರೂ ಆದಾಯ ಗಳಿಸುತ್ತಿದ್ದಾರೆ. ದೋಟಿ ಮೂಲಕ ಮಾಡುವ ಮರ ಗೆಲಸದಲ್ಲಿ ಅಪಾಯ ಸಾಧ್ಯತೆ ತೀರಾ ಕಡಿಮೆ ಇರುವುದು ಹೆಚ್ಚು ಹೆಚ್ಚು ಯುವಕರನ್ನು ಈ ಕೆಲಸಕ್ಕೆ ಸೆಳೆಯಹತ್ತಿದೆ.

ತರಬೇತಿಯ ಬಗ್ಗೆ ಹೆಚ್ಚಿನ ವಿವರಗಳಿಗೆ ಶಂ. ನಾ. ಖಂಡಿಗೆ( ಶಿಬಿರಾಧಿಕಾರಿ) : 99464 06321, ಈಶ್ವರ ನಾಯ್ಕ : 94493 32906 ಇವರನ್ನು ಸಂಪರ್ಕಿಸಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago