Advertisement
ಕೃಷಿ

ಕ್ಯಾಂಪ್ಕೋ ಪ್ರಕಟಣೆ | ದೋಟಿ ಕೊಯ್ಲು ತರಬೇತಿಗೆ ಅರ್ಜಿ ಆಹ್ವಾನ

Share

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಪರಿಹರಿಸಲು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೊಯ್ಲು ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದೆ. ತರಬೇತಿ ಜನವರಿ ತಿಂಗಳ 10 ರಿಂದ 12 ರ ವರೆಗೆ ಮೂರು ದಿನ ವಿಟ್ಲ ಸಿಪಿಸಿಆರ್ ಐಯಲ್ಲಿ ನಡೆಯಲಿದೆ.

ದಕ್ಷಿಣಕನ್ನಡ ಮತ್ತುಕಾಸರಗೋಡು ಜಿಲ್ಲೆಯ 18ರಿಂದ 35 ವರ್ಷದ ಒಳಗಿನ ಯುವಕರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು ಕ್ಯಾಂಪ್ಕೋ  ಶಾಖೆಗಳಿಂದ ಪಡೆಯಬಹುದು. ಇದೇ ಫಾರ್ಮಿನ ಮಾದರಿಗಳನ್ನು ಹಲವು ವಾಟ್ಸಪ್ ಗುಂಪುಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಅದನ್ನೇ ಮುದ್ರಿಸಿ ಬಳಸಲೂಬಹುದು. ಅರ್ಜಿಯ ಜೊತೆಗೆಇತ್ತೀಚೆಗಿನ ಎರಡು ಭಾವಚಿತ್ರ, ಆಧಾರ್ ಮತ್ತು ಪಾನ್‍ ಕಾರ್ಡಿನ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು. ತುಂಬಿಸಿದ ಅರ್ಜಿ ಫಾರ್ಮನ್ನು ಕ್ಯಾಂಪ್ಕೋದ ಯಾವುದೇ ಶಾಖೆಯಲ್ಲಿ ಸಲ್ಲಿಸಬಹುದು.

ಅನುಭವಿ ತರಬೇತುದಾರರು ಫೈಬರ್‍ಕಾರ್ಬನ್‍ ದೋಟಿ ಬಳಸಿ ಅಡಿಕೆಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ತರಬೇತಿಯಲ್ಲಿ ಒಟ್ಟು 20 ಮಂದಿಗೆ ಮಾತ್ರ ಅವಕಾಶ ಇರುತ್ತದೆ. ಶಿಬಿರದ ಅವಧಿಯಲ್ಲಿಡೀ ಅಭ್ಯರ್ಥಿಗಳಿಗೆ ಶಿಬಿರ ಕೇಂದ್ರ ವಾಸ್ತವ್ಯ ಕಡ್ಡಾಯ. ಉಚಿತ ವಾಸ್ತವ್ಯ ಮತ್ತುಆಹಾರದ ಏರ್ಪಾಡು ಇದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20.

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ವಿದ್ಯೆ ಕಲಿತ ಹಲವರು ವೃತ್ತಿ ನಡೆಸುತ್ತಿದ್ದು ಬದುಕಿನಲ್ಲಿ ಪ್ರಗತಿ ಹೊಂದಿದ್ದಾರೆ. ದೋಟಿಯ ಮೂಲಕ ಕೊಯ್ಲು – ಸಿಂಪಡಣೆ ಮಾಡುವ ಕ್ರಮ ಉತ್ತರ ಕನ್ನಡದಲ್ಲಿ ಜನಪ್ರಿಯತೆ ಪಡೆಯುತ್ತಿದೆ. ಹಲವು ಹಳ್ಳಿಗಳಲ್ಲಿ ದೋಟಿ ಜಾಬ್ ವರ್ಕರುಗಳು ತಯಾರಾಗಿ ವೃತ್ತಿ ಮಾಡುತ್ತಿದ್ದಾರೆ. ಕುಮಟಾ ತಾಲೂಕಿನ ಮೂರೂರು-ಕಲ್ಲಬ್ಬೆಯಲ್ಲಿ ಕಳೆದೆರಡು ವರ್ಷಗಳಲ್ಲಿ 50ಕ್ಕೂ ಹೆಚ್ಚು ಜಾಬ್ ವರ್ಕರುಗಳು ರೂಪುಗೊಂಡು ಒಂದು ಅನನ್ಯ ಯಶೋಗಾಥೆ ಸೃಷ್ಟಿಯಾಗಿದೆ. ಈ ಮಂದಿ ವರ್ಷದ ಆರು ತಿಂಗಳ ಕಾಲ ಪ್ರತಿ ತಿಂಗಳಿಗೆ ಕನಿಷ್ಠ್ಠ 25,000 ರೂ ಆದಾಯ ಗಳಿಸುತ್ತಿದ್ದಾರೆ. ದೋಟಿ ಮೂಲಕ ಮಾಡುವ ಮರ ಗೆಲಸದಲ್ಲಿ ಅಪಾಯ ಸಾಧ್ಯತೆ ತೀರಾ ಕಡಿಮೆ ಇರುವುದು ಹೆಚ್ಚು ಹೆಚ್ಚು ಯುವಕರನ್ನು ಈ ಕೆಲಸಕ್ಕೆ ಸೆಳೆಯಹತ್ತಿದೆ.

ತರಬೇತಿಯ ಬಗ್ಗೆ ಹೆಚ್ಚಿನ ವಿವರಗಳಿಗೆ ಶಂ. ನಾ. ಖಂಡಿಗೆ( ಶಿಬಿರಾಧಿಕಾರಿ) : 99464 06321, ಈಶ್ವರ ನಾಯ್ಕ : 94493 32906 ಇವರನ್ನು ಸಂಪರ್ಕಿಸಬಹುದು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 hour ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

5 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

13 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

13 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

15 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

22 hours ago