Advertisement
ಕೃಷಿ

ಜ.10 ರಿಂದ ಕ್ಯಾಂಪ್ಕೋ ವತಿಯಿಂದ ದೋಟಿ ಕೊಯ್ಲು ತರಬೇತಿ | ಸೊಸೈಟಿಗಳ ಸಹಕಾರಕ್ಕೆ ವಿನಂತಿ

Share

ಕ್ಯಾಂಪ್ಕೋ ವತಿಯಿಂದ ಜ.10 ರಿಂದ ಮೂರು ದಿನದ ದೋಟಿ ಕೊಯ್ಲು ಹಾಗೂ ಸಿಂಪಡಣೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಸಾಕಷ್ಟು ಅರ್ಜಿಗಳು ಬಂದಿದ್ದು ಪ್ರಾಥಮಿಕ ಸಹಕಾರಿ ಸಂಘಗಳಿಂದಲೂ ಕೂಡಾ ಈ ದಿಸೆಯಲ್ಲಿ ಸಹಕಾರ ಬೇಕಾಗಿದೆ ಎಂದು ಕ್ಯಾಂಪ್ಕೋ ಮನವಿ ಮಾಡಿದೆ.

ಈ ತರಬೇತಿ ದಕ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಸದ್ಯ ಮೀಸಲು. ಈತರಬೇತಿಯ ನಂತರ ಜಾಬ್ ವರ್ಕ್‌ ಮಾಡುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಇನ್ನೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಹಾಗೂ ಕೌಶಲ್ಯ ಹೆಚ್ಚಿಸಲು ನೆಲೆಯಲ್ಲೂ ಈ ಯೋಜನೆಯನ್ನು ಗ್ರಾಮೀಣ ಭಾಗಗಳಿಗೂ ತಲುಪುವ ಉದ್ದೇಶದಿಂದ ಸಹಕಾರಿ ಸಂಘಗಳ ಸಹಕಾರ ಅಗತ್ಯವಾಗಿದ್ದು ಸಹಕಾರಿ ಸಂಘಗಳ ಮೂಲಕ ಅರ್ಜಿ ಹಾಕಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ದಶಂಬರ 20.  ಅರ್ಜಿಫಾರಂಗಳು  ದಕ ಹಾಗೂ ಕಾಸರಗೋಡು ಜಿಲ್ಲೆಗಳ ಎಲ್ಲಾ ಕ್ಯಾಂಪ್ಕೋ ಶಾಖೆಗಳಲ್ಲಿ ಲಭ್ಯವಿವೆ.  ಅರ್ಹ ಅಭ್ಯರ್ಥಿಗಳು ಹೆಚ್ಚಿದ್ದರೆ ಮುಂದೆ ಸೊಸೈಟಿ ಮಟ್ಟದಲ್ಲೇ ಚಿಕ್ಕಚಿಕ್ಕ ತರಬೇತಿ ಶಿಬಿರ ಏರ್ಪಡಿಸಬಹುದು.

Advertisement

ದೋಟಿ ಮೂಲಕ ಮಾಡುವ ಕೊಯ್ಲಿನಲ್ಲಿ ಅಪಾಯ ಸಾಧ್ಯತೆ ಕಡಿಮೆ. ಇದರಿಂದಾಗಿ ಕುಮಟಾ ತಾಲೂಕಿನ ಮೂರೂರು – ಕಲ್ಲಬ್ಬೆಗಳಲ್ಲಿ 50ಕ್ಕೂ ಹೆಚ್ಚು ಜಾಬ್‌ ವರ್ಕ್‌ ಮಾಡಲು ತಯಾರಾಗಿದ್ದಾರೆ. ಇವರು ತಿಂಗಳಿಗೆ 25,000 ರೂ.ಯಷ್ಟು ಆದಾಯ ಗಳಿಸುತ್ತಿದ್ದಾರೆ. ಅಡಿಕೆ ಪ್ರದೇಶದಲ್ಲಿಈ ಥರದ ಜಾಬ್‌ ವರ್ಕ್‌ ಗೆ ಹೆಚ್ಚುಒಲವು ಪಡೆಯುತ್ತಿದೆ.

ಪರಿಸ್ಥಿತಿ ಮನಗಂಡ ತೀರ್ಥಹಳ್ಳಿಯ ಕೃಷಿಕ ಸಂಘಟನೆಗಳು ಮತ್ತು ಉತ್ತರಕನ್ನಡದ ಹಲವು ಪ್ರಾಥಮಿಕ ಸೊಸೈಟಿಗಳೂ ದೋಟಿ ಮೂಲಕ ಕೊಯ್ಲಿನ ತರಬೇತಿ ನೀಡಲು ಮುಂದಾಗಿವೆ.

Advertisement

ಅಡಿಕೆಪತ್ರಿಕೆ, ಸಿಪಿಸಿಆರ್‌ಐ, ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘಗಳು ಕ್ಯಾಂಪ್ಕೋ ತರಬೇತಿಗೆ ಸಹಯೋಗ ಕೊಡುತ್ತಿವೆ. ಕೋವಿಡ್ ಕಾರಣದಿಂದ  ನಗರಗಳಿಂದ ಹಳ್ಳಿಗೆ ಮರಳಿದ ಯುವಕರು ಮತ್ತು ಕಳೆಕತ್ತರಿಸುವ ಜಾಬ್ ವರ್ಕ್‌ ಮಾಡುವವರಿಗೆ  ಈ ತರಬೇತಿ ಉತ್ತಮ ಅವಕಾಶ ತೆರೆದುಕೊಡಬಲ್ಲುದು. ತರಬೇತಿಯ ಬಗ್ಗೆ ತಿಳಿಸಿಕೊಟ್ಟು, ವಿವಿಧ ಊರುಗಳ ಅರ್ಹ ಅಭ್ಯರ್ಥಿಗಳನ್ನು ಮುಂದೆ ತರಲು ಪ್ರಾಥಮಿಕ ಸಹಕಾರಿ ಸಂಘಗಳ ಸಹಕಾರವನ್ನು ಕೋರಲಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ. ಹೆಚ್ಚಿನವಿವರಗಳಿಗೆ ಶಂ. ನಾ. ಖಂಡಿಗೆ( ಶಿಬಿರಾಧಿಕಾರಿ) : 99464 06321, ಈಶ್ವರನಾಯ್ಕ : 94493 32906 ಇವರನ್ನುಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago