Advertisement
ಕೃಷಿ

ಜ.10 ರಿಂದ ಕ್ಯಾಂಪ್ಕೋ ವತಿಯಿಂದ ದೋಟಿ ಕೊಯ್ಲು ತರಬೇತಿ | ಸೊಸೈಟಿಗಳ ಸಹಕಾರಕ್ಕೆ ವಿನಂತಿ

Share

ಕ್ಯಾಂಪ್ಕೋ ವತಿಯಿಂದ ಜ.10 ರಿಂದ ಮೂರು ದಿನದ ದೋಟಿ ಕೊಯ್ಲು ಹಾಗೂ ಸಿಂಪಡಣೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಸಾಕಷ್ಟು ಅರ್ಜಿಗಳು ಬಂದಿದ್ದು ಪ್ರಾಥಮಿಕ ಸಹಕಾರಿ ಸಂಘಗಳಿಂದಲೂ ಕೂಡಾ ಈ ದಿಸೆಯಲ್ಲಿ ಸಹಕಾರ ಬೇಕಾಗಿದೆ ಎಂದು ಕ್ಯಾಂಪ್ಕೋ ಮನವಿ ಮಾಡಿದೆ.

ಈ ತರಬೇತಿ ದಕ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಸದ್ಯ ಮೀಸಲು. ಈತರಬೇತಿಯ ನಂತರ ಜಾಬ್ ವರ್ಕ್‌ ಮಾಡುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಇನ್ನೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಹಾಗೂ ಕೌಶಲ್ಯ ಹೆಚ್ಚಿಸಲು ನೆಲೆಯಲ್ಲೂ ಈ ಯೋಜನೆಯನ್ನು ಗ್ರಾಮೀಣ ಭಾಗಗಳಿಗೂ ತಲುಪುವ ಉದ್ದೇಶದಿಂದ ಸಹಕಾರಿ ಸಂಘಗಳ ಸಹಕಾರ ಅಗತ್ಯವಾಗಿದ್ದು ಸಹಕಾರಿ ಸಂಘಗಳ ಮೂಲಕ ಅರ್ಜಿ ಹಾಕಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ದಶಂಬರ 20.  ಅರ್ಜಿಫಾರಂಗಳು  ದಕ ಹಾಗೂ ಕಾಸರಗೋಡು ಜಿಲ್ಲೆಗಳ ಎಲ್ಲಾ ಕ್ಯಾಂಪ್ಕೋ ಶಾಖೆಗಳಲ್ಲಿ ಲಭ್ಯವಿವೆ.  ಅರ್ಹ ಅಭ್ಯರ್ಥಿಗಳು ಹೆಚ್ಚಿದ್ದರೆ ಮುಂದೆ ಸೊಸೈಟಿ ಮಟ್ಟದಲ್ಲೇ ಚಿಕ್ಕಚಿಕ್ಕ ತರಬೇತಿ ಶಿಬಿರ ಏರ್ಪಡಿಸಬಹುದು.

ದೋಟಿ ಮೂಲಕ ಮಾಡುವ ಕೊಯ್ಲಿನಲ್ಲಿ ಅಪಾಯ ಸಾಧ್ಯತೆ ಕಡಿಮೆ. ಇದರಿಂದಾಗಿ ಕುಮಟಾ ತಾಲೂಕಿನ ಮೂರೂರು – ಕಲ್ಲಬ್ಬೆಗಳಲ್ಲಿ 50ಕ್ಕೂ ಹೆಚ್ಚು ಜಾಬ್‌ ವರ್ಕ್‌ ಮಾಡಲು ತಯಾರಾಗಿದ್ದಾರೆ. ಇವರು ತಿಂಗಳಿಗೆ 25,000 ರೂ.ಯಷ್ಟು ಆದಾಯ ಗಳಿಸುತ್ತಿದ್ದಾರೆ. ಅಡಿಕೆ ಪ್ರದೇಶದಲ್ಲಿಈ ಥರದ ಜಾಬ್‌ ವರ್ಕ್‌ ಗೆ ಹೆಚ್ಚುಒಲವು ಪಡೆಯುತ್ತಿದೆ.

ಪರಿಸ್ಥಿತಿ ಮನಗಂಡ ತೀರ್ಥಹಳ್ಳಿಯ ಕೃಷಿಕ ಸಂಘಟನೆಗಳು ಮತ್ತು ಉತ್ತರಕನ್ನಡದ ಹಲವು ಪ್ರಾಥಮಿಕ ಸೊಸೈಟಿಗಳೂ ದೋಟಿ ಮೂಲಕ ಕೊಯ್ಲಿನ ತರಬೇತಿ ನೀಡಲು ಮುಂದಾಗಿವೆ.

ಅಡಿಕೆಪತ್ರಿಕೆ, ಸಿಪಿಸಿಆರ್‌ಐ, ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘಗಳು ಕ್ಯಾಂಪ್ಕೋ ತರಬೇತಿಗೆ ಸಹಯೋಗ ಕೊಡುತ್ತಿವೆ. ಕೋವಿಡ್ ಕಾರಣದಿಂದ  ನಗರಗಳಿಂದ ಹಳ್ಳಿಗೆ ಮರಳಿದ ಯುವಕರು ಮತ್ತು ಕಳೆಕತ್ತರಿಸುವ ಜಾಬ್ ವರ್ಕ್‌ ಮಾಡುವವರಿಗೆ  ಈ ತರಬೇತಿ ಉತ್ತಮ ಅವಕಾಶ ತೆರೆದುಕೊಡಬಲ್ಲುದು. ತರಬೇತಿಯ ಬಗ್ಗೆ ತಿಳಿಸಿಕೊಟ್ಟು, ವಿವಿಧ ಊರುಗಳ ಅರ್ಹ ಅಭ್ಯರ್ಥಿಗಳನ್ನು ಮುಂದೆ ತರಲು ಪ್ರಾಥಮಿಕ ಸಹಕಾರಿ ಸಂಘಗಳ ಸಹಕಾರವನ್ನು ಕೋರಲಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ. ಹೆಚ್ಚಿನವಿವರಗಳಿಗೆ ಶಂ. ನಾ. ಖಂಡಿಗೆ( ಶಿಬಿರಾಧಿಕಾರಿ) : 99464 06321, ಈಶ್ವರನಾಯ್ಕ : 94493 32906 ಇವರನ್ನುಸಂಪರ್ಕಿಸಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

32 minutes ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

7 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

16 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

24 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

24 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago