ಅಡಿಕೆ ಕೌಶಲ್ಯ ಪಡೆ – 2.0 | ಕ್ಯಾಂಪ್ಕೋದಿಂದ ದೋಟಿ ಆಧಾರಿತ ಅಡಿಕೆ ಕೌಶಲ್ಯ ತರಬೇತಿ | ರೈತ ಪರವಾದ ಇನ್ನೊಂದು ಹೆಜ್ಜೆ |

November 24, 2021
9:14 AM

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಕುಗ್ಗಿಸಲು ಮಂಗಳೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೌಶಲ್ಯ ಪಡೆ ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮಕ್ಕೆ ಕೃಷಿಕರ ಮಾಧ್ಯಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ಗಳು ಸಹಭಾಗಿತ್ವ ನೀಡಲಿವೆ.

ಈ ಬಗ್ಗೆ  ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ , ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ , ಪತ್ರಿಕೆಯ ಸಂಪಾದಕ – ಪ್ರಕಾಶಕ ರಾಮಕೃಷ್ಣ ಶಾಸ್ತ್ರಿ  ಸಲಹೆ ನೀಡಿದರು.

Advertisement

ತರಬೇತಿಯು ಜನವರಿ ತಿಂಗಳಲ್ಲಿ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನೆ ಸಂಸ್ಥೆಯಲ್ಲಿ(CPCRI)  ನಡೆಯಲಿದೆ. ಮೂರು ದಿನಗಳ ಈ ತರಬೇತಿಯಲ್ಲಿ ಆಯ್ದ ಇಪ್ಪತ್ತು ಜನರಿಗೆ ಅವಕಾಶ ಇರುತ್ತದೆ.

ಅನುಭವಿ ತರಬೇತುದಾರರು ಫೈಬರ್ ಕಾರ್ಬನ್ ದೋಟಿ ಬಳಸಿ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯರು ಶಿಬಿರದಲ್ಲಿ ಭಾಗವಹಿಸಬಹುದು. ಉಳಿದ ವಿವರಗಳನ್ನು ಮುಂದೆ ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ತಿಳಿಸಿದೆ.

Advertisement

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ಕೊನೆಗಾರ ವಿದ್ಯೆ ಕಲಿತ ಹಲವರು ಈ ವೃತ್ತಿ ಮುಂದುವರಿಸಿದ್ದು ಬದುಕನ್ನೂ ಹಸನು ಮಾಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror