Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ – 2.0 | ಕ್ಯಾಂಪ್ಕೋದಿಂದ ದೋಟಿ ಆಧಾರಿತ ಅಡಿಕೆ ಕೌಶಲ್ಯ ತರಬೇತಿ | ರೈತ ಪರವಾದ ಇನ್ನೊಂದು ಹೆಜ್ಜೆ |

Share

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಕುಗ್ಗಿಸಲು ಮಂಗಳೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೌಶಲ್ಯ ಪಡೆ ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮಕ್ಕೆ ಕೃಷಿಕರ ಮಾಧ್ಯಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ಗಳು ಸಹಭಾಗಿತ್ವ ನೀಡಲಿವೆ.

ಈ ಬಗ್ಗೆ  ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ , ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ , ಪತ್ರಿಕೆಯ ಸಂಪಾದಕ – ಪ್ರಕಾಶಕ ರಾಮಕೃಷ್ಣ ಶಾಸ್ತ್ರಿ  ಸಲಹೆ ನೀಡಿದರು.

ತರಬೇತಿಯು ಜನವರಿ ತಿಂಗಳಲ್ಲಿ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನೆ ಸಂಸ್ಥೆಯಲ್ಲಿ(CPCRI)  ನಡೆಯಲಿದೆ. ಮೂರು ದಿನಗಳ ಈ ತರಬೇತಿಯಲ್ಲಿ ಆಯ್ದ ಇಪ್ಪತ್ತು ಜನರಿಗೆ ಅವಕಾಶ ಇರುತ್ತದೆ.

ಅನುಭವಿ ತರಬೇತುದಾರರು ಫೈಬರ್ ಕಾರ್ಬನ್ ದೋಟಿ ಬಳಸಿ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯರು ಶಿಬಿರದಲ್ಲಿ ಭಾಗವಹಿಸಬಹುದು. ಉಳಿದ ವಿವರಗಳನ್ನು ಮುಂದೆ ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ತಿಳಿಸಿದೆ.

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ಕೊನೆಗಾರ ವಿದ್ಯೆ ಕಲಿತ ಹಲವರು ಈ ವೃತ್ತಿ ಮುಂದುವರಿಸಿದ್ದು ಬದುಕನ್ನೂ ಹಸನು ಮಾಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

24 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago