ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟ್‌ ಕಾರ್ಖಾನೆಯಲ್ಲಿ ವ್ಯಾಮ್ ಯಂತ್ರ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಪುತ್ತೂರಿನಲ್ಲಿ ನೂತನ ವ್ಯಾಮ್ ಯಂತ್ರ (ಆವಿ ಹೀರಿಕೊಳ್ಳುವ ಯಂತ್ರ) ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ನೂತನ ಯಂತ್ರವನ್ನು ಉದ್ಘಾಟಿಸಿದರು.

Advertisement

ನೀರು ಮತ್ತು ಗಾಳಿ ಹೇಗೆ ಮನುಷ್ಯರಿಗೆ ಜೀವನಾವವಶ್ಯಕವೋ,ಅದೇ ರೀತಿ ಸರಿಯಾದ ಗುಣಮಟ್ಟದ ಶುದ್ದ ನೀರು ಮತ್ತು ಗಾಳಿ, ಆಹಾರ ಉತ್ಪಾದನೆಗೂ ಅಗತ್ಯ. ಅತ್ಯಂತ ಹೆಚ್ಚು ಉಷ್ಣತೆಯ ಸ್ಟೀಮ್ ಅನ್ನು ಉಪಯೋಗಿಸಿಕೊಂಡು ಆಹಾರೋತ್ಪನ್ನಗಳ ಉತ್ಪಾದನೆಗೆ ಸೂಕ್ತವಾದ ತಂಪು ನೀರು ಹಾಗೂ ಗಾಳಿಯನ್ನು ಉತ್ಪಾದಿಸುವ ಯಂತ್ರವೇ ವ್ಯಾಮ್.(Vapour absorpsion machine). ಆವಿಹೀರಿಕೊಳ್ಳುವ ಯಂತ್ರವು ತಂಪಾಗಿಸುವ ಪ್ರಕ್ರಿಯೆಗೆ ಅಗತ್ಯವಿರುವ ಶಕ್ತಿಯನ್ನು ಒದಗಿಸಲು ಶಾಖಮೂಲವನ್ನು ಬಳಸುವ ರೆಫ್ರಿಜಿರೇಟರ್‌ ಆಗಿದೆ. ಇದರಿಂದ, ಇಡೀ ಚಾಕಲೇಟ್ ಕಾರ್ಖಾನೆಯ ಹವಾನಿಯಂತ್ರಣಕ್ಕಾಗಿ ವಿದ್ಯುತ್ಶಕ್ತಿಯನ್ನು ಉಳಿಸುವುದರ ಮೂಲಕ ಉತ್ಪಾದನಾ ವೆಚ್ಚವನ್ನು ಕಡಿಮೆಮಾಡಬಹುದಾಗಿದೆ.

ಈ ನೂತನ ವ್ಯಾಮ್ ಯಂತ್ರ ಉದ್ಘಾಟನೆಗೂ ಮುನ್ನ  ಕೆಮ್ಮಿಂಜೆ ನಾಗೇಶ ತಂತ್ರಿಯವರು ವೈದಿಕ ಕಾರ್ಯವನ್ನು ನೆರವೇರಿಸಿದರು. ಈ ಸಂದರ್ಭ
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾದ ಶಂಕರ ನಾರಾಯಣ ಖಂಡಿಗೆ, ವ್ಯವಸ್ಥಾಪನಾ ನಿರ್ದೇಶಕರಾದ ಎಚ್. ಎಮ್. ಕೃಷ್ಣ ಕುಮಾರ್ ,ಕ್ಯಾಂಪ್ಕೋ ನಿರ್ದೇಶಕರುಗಳಾದ  ಕೆ ಬಾಲಕೃಷ್ಣ ರೈ, ಪದ್ಮರಾಜ್ ಪಟ್ಟಾಜೆ, ಮಹೇಶ್ ಚೌಟ, ರಾಧಾಕೃಷ್ಣ  ,ಸತ್ಯನಾರಾಯಣ ಪ್ರಸಾದ್, ಡಾ.ಜಯಪ್ರಕಾಶ್, ರಾಘವೇಂದ್ರ ಭಟ್‌ ಕೆದಿಲ,  ಮತ್ತು ಚಾಕಲೇಟ್‌ ಪ್ಯಾಕಟ್ರಿ ಎಜಿಎಂ ಶ್ಯಾಮ್ ಪ್ರಸಾದ್‌ ಉಪಸ್ಥಿತರಿದ್ದರು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

2 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

2 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

2 hours ago

ಗುರು-ಬುಧನಿಂದ ಈ 5 ರಾಶಿಗೆ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago