ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಮುಂಬರುವ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಇದೇ ರೀತಿ ಮಳೆ ಸುರಿದಲ್ಲಿ ಹೆಚ್ಚಿನ ಬೆಳೆ ನಾಶವಾಗಲಿದೆ. ಅಡಿಕೆ ಬೆಳೆನಾಶದ ಬಗ್ಗೆ ಸಮೀಕ್ಷೆ ನಡೆಸಿ , ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.
ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ , ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಜಾಸ್ತಿ ಮುಂಗಾರು ಮಳೆ ಸುರಿಯುತ್ತಿದೆ. ಈಗಾಗಲೇ ಎರಡು ಬಾರಿ ಔಷಧಿ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯ ಪರಿಣಾಮ ಕೊಳೆರೋಗದಿಂದ ಈಗಾಗಲೇ ಅರ್ಧ ಬೆಳೆನಾಶವಾಗಿ ಹೋಗಿದೆ. ಅಳಿದುಳಿದ ಬೆಳೆರಕ್ಷಣೆಗೆ ರೈತರು ಹೆಣಗಾಡುತ್ತಿದ್ದರೂ ಪರಿಣಾಮ ಶೂನ್ಯ. ಹತಾಶೆಯಿಂದ ರೈತರು ಪರಿಹಾರಕ್ಕಾಗಿ ಸರಕಾರದ ಕಡೆ ಆಶಾಭಾವನೆಯಿಂದ ನೋಡುತ್ತಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣವೇ ಗಮನಹರಿಸಬೇಕು. ಬೆಳೆನಷ್ಟದ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಂದ ಸಮೀಕ್ಷೆ ನಡೆಸಬೇಕು. ಬೆಳೆನಾಶದಿಂದ ಉಂಟಾದ ಆರ್ಥಿಕ ನಷ್ಟಕ್ಕೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷರು ಸಮಸ್ತ ಬೆಳೆಗಾರರ ಪರವಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…