Advertisement
MIRROR FOCUS

ಎಲ್ಲೆಲ್ಲಾ ಸಾಧ್ಯವೋ… ಹೇಗೆಲ್ಲಾ ಸಾಧ್ಯವೋ ಹಾಗೆ ಅಡಿಕೆ ಕಳ್ಳದಾರಿಯ ಮೂಲಕ ಆಗಮನ | ಅಡಿಕೆ ಆಮದು ತಡೆಗೆ ಕೇಂದ್ರದ ಸಹಕಾರ ಕೋರಿದ ಕ್ಯಾಂಪ್ಕೋ |

Share

ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿದ್ದು, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಅಡಿಕೆ ಆಮದು ತಡೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಇದೆ ಎಂದು ಪತ್ರದಲ್ಲಿ ಕ್ಯಾಂಪ್ಕೋ ತಿಳಿಸಿದೆ.

Advertisement
Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಈಶಾನ್ಯ ರಾಜ್ಯಗಳ ಮೂಲಕ ಆಗಮನವಾಗುತ್ತಿದ್ದರೆ, ಅಲ್ಲಿ ಬಿಗು ಕ್ರಮವಾಗುತ್ತಿದ್ದಂತೆಯೇ ಶ್ರೀಲಂಕಾ ಸೇರಿದಂತೆ ಇತರೆಡೆಗಳಿಂದ ಹಡಗಿನ ಮೂಲಕವೂ ಆಗಮನವಾಯಿತು. ಇಲ್ಲೂ ತೆರಿಗೆ ಇಲಾಖೆ ಚುರುಕಾಗದಂತೆ ವಿಮಾನದ ಮೂಲಕ ಅಡಿಕೆ ಆಮದಾಗುತ್ತದೆ. ವಿಮಾನದ ಮೂಲಕ ಬರುವ ಅಡಿಕೆಯು ಮಹಾರಾಷ್ಟ್ರದ ಮಾರುಕಟ್ಟೆಗೆ ಬಂದು ದೇಶದ ವಿವಿದೆಡೆಗೆ ರವಾನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ತಡೆ ಬಹುದೊಡ್ಡ ಸವಾಲಾಗಿದೆ. ಇದಕ್ಕಾಗಿ ಸರ್ಕಾರದ ನೆರವು ಅಗತ್ಯ ಇದೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಸದಾ ಬದ್ಧವಾಗಿದ್ದು, ಕೇಂದ್ರ ಸರ್ಕಾರವೂ ಅಡಿಕೆ ಬೆಳೆಗಾರರ ಪರವಾಗಿರುವ ಕಾರಣದಿಂದ ಬೆಳೆಗಾರರ ಹಿತಕಾಯಲು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಡಿಕೆ ಆಮದು ದೇಶೀಯ ಅಡಿಕೆ ಮಾರುಕಟ್ಟೆಯ ಮೇಲೆ ಗಂಭೀರವಾದ ಪರಿಣಾಮ ಉಂಟು ಮಾಡುತ್ತದೆ ಮತ್ತು ರೈತರಿಗೆ ಗಣನೀಯ ನಷ್ಟವನ್ನು ಉಂಟುಮಾಡುತ್ತದೆ. ಆರಂಭದಲ್ಲಿ ವಿವಿಧ ಬಂದರುಗಳ ಮೂಲಕ ಅಡಿಕೆ ಆಮದು ಆಗುತ್ತಿತ್ತು, ನಂತರ ದೇಶದ ಗಡಿಭಾಗಗಳಾದ ಸಿಲ್ಚಾರ್‌ ಸೇರಿದಂತೆ ವಿವಿಧ ಕಡೆಗಳಿಂದ ಅಸ್ಸಾಂ ಮೂಲಕ ಅಡಿಕೆ ಬರುತ್ತಿತ್ತು.ನಂತರ ಇಂಫಾಲ್‌ನಂತಹ  ವಿಮಾನ ನಿಲ್ದಾಣಗಳಿಂದ ಕೋಲ್ಕತ್ತಾ,  ಬೆಂಗಳೂರು, ಹೈದರಾಬಾದ್, ನಾಗ್ಪುರ ಮತ್ತು ಅಹಮದಾಬಾದ್ ಗಳಿಗೆ ಬರುತ್ತವೆ. ಪ್ರತೀ ಬ್ಯಾಗ್‌ ನಲ್ಲಿ 30 ಕೆಜಿಯಂತೆ ರವಾನೆಯಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ವಿವರವಾಗಿ  ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಈಚೆಗೆ ಡ್ರೈಫ್ರುಟ್‌, ಹುರಿದ ಅಡಿಕೆ , ಮೀನಿನ ಉತ್ಪನ್ನದ ಹೆಸರಿನಲ್ಲಿಯೂ ಅಡಿಕೆ ಆಮದು ಆರಂಭವಾಗಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ತಕ್ಷಣ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

6 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

7 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

7 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

7 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

7 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

7 hours ago