MIRROR FOCUS

ಎಲ್ಲೆಲ್ಲಾ ಸಾಧ್ಯವೋ… ಹೇಗೆಲ್ಲಾ ಸಾಧ್ಯವೋ ಹಾಗೆ ಅಡಿಕೆ ಕಳ್ಳದಾರಿಯ ಮೂಲಕ ಆಗಮನ | ಅಡಿಕೆ ಆಮದು ತಡೆಗೆ ಕೇಂದ್ರದ ಸಹಕಾರ ಕೋರಿದ ಕ್ಯಾಂಪ್ಕೋ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿದ್ದು, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಅಡಿಕೆ ಆಮದು ತಡೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಇದೆ ಎಂದು ಪತ್ರದಲ್ಲಿ ಕ್ಯಾಂಪ್ಕೋ ತಿಳಿಸಿದೆ.

Advertisement
Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಈಶಾನ್ಯ ರಾಜ್ಯಗಳ ಮೂಲಕ ಆಗಮನವಾಗುತ್ತಿದ್ದರೆ, ಅಲ್ಲಿ ಬಿಗು ಕ್ರಮವಾಗುತ್ತಿದ್ದಂತೆಯೇ ಶ್ರೀಲಂಕಾ ಸೇರಿದಂತೆ ಇತರೆಡೆಗಳಿಂದ ಹಡಗಿನ ಮೂಲಕವೂ ಆಗಮನವಾಯಿತು. ಇಲ್ಲೂ ತೆರಿಗೆ ಇಲಾಖೆ ಚುರುಕಾಗದಂತೆ ವಿಮಾನದ ಮೂಲಕ ಅಡಿಕೆ ಆಮದಾಗುತ್ತದೆ. ವಿಮಾನದ ಮೂಲಕ ಬರುವ ಅಡಿಕೆಯು ಮಹಾರಾಷ್ಟ್ರದ ಮಾರುಕಟ್ಟೆಗೆ ಬಂದು ದೇಶದ ವಿವಿದೆಡೆಗೆ ರವಾನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ತಡೆ ಬಹುದೊಡ್ಡ ಸವಾಲಾಗಿದೆ. ಇದಕ್ಕಾಗಿ ಸರ್ಕಾರದ ನೆರವು ಅಗತ್ಯ ಇದೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಸದಾ ಬದ್ಧವಾಗಿದ್ದು, ಕೇಂದ್ರ ಸರ್ಕಾರವೂ ಅಡಿಕೆ ಬೆಳೆಗಾರರ ಪರವಾಗಿರುವ ಕಾರಣದಿಂದ ಬೆಳೆಗಾರರ ಹಿತಕಾಯಲು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಡಿಕೆ ಆಮದು ದೇಶೀಯ ಅಡಿಕೆ ಮಾರುಕಟ್ಟೆಯ ಮೇಲೆ ಗಂಭೀರವಾದ ಪರಿಣಾಮ ಉಂಟು ಮಾಡುತ್ತದೆ ಮತ್ತು ರೈತರಿಗೆ ಗಣನೀಯ ನಷ್ಟವನ್ನು ಉಂಟುಮಾಡುತ್ತದೆ. ಆರಂಭದಲ್ಲಿ ವಿವಿಧ ಬಂದರುಗಳ ಮೂಲಕ ಅಡಿಕೆ ಆಮದು ಆಗುತ್ತಿತ್ತು, ನಂತರ ದೇಶದ ಗಡಿಭಾಗಗಳಾದ ಸಿಲ್ಚಾರ್‌ ಸೇರಿದಂತೆ ವಿವಿಧ ಕಡೆಗಳಿಂದ ಅಸ್ಸಾಂ ಮೂಲಕ ಅಡಿಕೆ ಬರುತ್ತಿತ್ತು.ನಂತರ ಇಂಫಾಲ್‌ನಂತಹ  ವಿಮಾನ ನಿಲ್ದಾಣಗಳಿಂದ ಕೋಲ್ಕತ್ತಾ,  ಬೆಂಗಳೂರು, ಹೈದರಾಬಾದ್, ನಾಗ್ಪುರ ಮತ್ತು ಅಹಮದಾಬಾದ್ ಗಳಿಗೆ ಬರುತ್ತವೆ. ಪ್ರತೀ ಬ್ಯಾಗ್‌ ನಲ್ಲಿ 30 ಕೆಜಿಯಂತೆ ರವಾನೆಯಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ವಿವರವಾಗಿ  ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಈಚೆಗೆ ಡ್ರೈಫ್ರುಟ್‌, ಹುರಿದ ಅಡಿಕೆ , ಮೀನಿನ ಉತ್ಪನ್ನದ ಹೆಸರಿನಲ್ಲಿಯೂ ಅಡಿಕೆ ಆಮದು ಆರಂಭವಾಗಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ತಕ್ಷಣ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago